ಉಡುಪಿ ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರೆ ಬಳಿಯ ಎರ್ಮಾಳಿನ ವಿಮಾನ ನಿಲ್ದಾಣ ಯೋಜನೆಯನ್ನು ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಸಂಸದ ಕೋಟ ಅವರ ಮನವಿಗೆ ಸ್ಪಂದಿಸಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಚಿವರು ಕೋಟ ಶ್ರೀನಿವಾಸ ಪೂಜಾರಿಗೆ ಬರೆದ ಪತ್ರದಲ್ಲಿ ಉಡಾನ್ ಯೋಜನೆಯಾದ ವಿಮಾನ ನಿಲ್ದಾಣ ಅಭಿವೃದ್ಧಿ ಮತ್ತು ಸುಧಾರಣೆಗಾಗಿ ಕೇಂದ್ರದ ಸಹಕಾರ ನೀಡಲು ಸಮ್ಮತಿ ಇದ್ದು ಸೂಕ್ತವಾದ ಸ್ಥಳವನ್ನು ಗುರುತಿಸಿ, ಯೋಜನೆಯ ಕಾರ್ಯ ಸಾಧ್ಯತೆಯ ಅಧ್ಯಯನ ನಡೆಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾಪನೆ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ:
ಭಾರತ ಸರಕಾರದ ಗ್ರೀನ್ ಫೀಲ್ಡ್ ನೀತಿಯಂತೆ ಕೇಂದ್ರ ಸರಕಾರ ನೆರವು ನೀಡಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ನನ್ನ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಗೌರವಾನ್ವಿತ ಸಚಿವರಿಗೆ ಧನ್ಯವಾದಗಳು. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಕೋಟ ತಿಳಿಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…