Featured

ರಾಜ್ಯ ಸರ್ಕಾರ ಹಿಜಾಬ್, ಹಲಾಲ್, ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದೆ : ದಿನೇಶ್ ಗುಂಡೂರಾವ್ – Vishwanews24

ಭಗವದ್ಗೀತೆಯ ತತ್ವಕ್ಕೆ ವಿರುದ್ಧವಾಗಿ ಮನುಷ್ಯ ದ್ವೇಷ ಪಸರಿಸುತ್ತಿರುವ ಬಿಜೆಪಿಯವರು ನಿಜವಾದ ಧರ್ಮದ್ರೋಹಿಗಳು..

ಸಾಧನೆಯ ಆಧಾರದಲ್ಲಿ ಜನರ ಮುಂದೆ ಹೋಗಲು ಈ ಸರ್ಕಾರಕ್ಕೆ ಮುಖವಿಲ್ಲ..

ಬೆಂಗಳೂರು : ರಾಜ್ಯದ ಅಭಿವೃದ್ಧಿಯನ್ನು ಕಾಲ ಕಸ‌ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಿಜಾಬ್,ಹಲಾಲ್,ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ, ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ‘ಸಾಧನೆಯ ಆಧಾರದಲ್ಲಿ ಜನರ ಮುಂದೆ ಹೋಗಲು ಈ ಸರ್ಕಾರಕ್ಕೆ ಮುಖವಿಲ್ಲ.

ಹಾಗಾಗಿ ಮುಗ್ದ ಜನರಿಗೆ ಧರ್ಮದ ಕಣ್ಕಾಪು ಕಟ್ಟಿ ಮೂರ್ಖರನ್ನಾಗಿಸುತ್ತಿದೆ. ಧರ್ಮದ ಅಮಲು ತಲೆಗೇರಿಸಿಕೊಂಡಿರುವ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.

‘ಭಗವದ್ಗೀತೆ,ಬೈಬಲ್,ಕುರಾನ್ ಸೇರಿದಂತೆ ಎಲ್ಲಾ ಗ್ರಂಥಗಳ ಸಾರವೇ ಶಾಂತಿ ಮತ್ತು ಪ್ರೀತಿ. ಯಾವ ಧರ್ಮವೂ ಮನುಷ್ಯ ದ್ವೇಷದ ಬೋಧನೆ ಮಾಡಿಲ್ಲ. ಗ್ರಂಥಗಳ ಸಾರ ಗೊತ್ತಿಲ್ಲದ ಬಿಜೆಪಿಯವರು ಜನರ ಮನಸ್ಸಿನಲ್ಲಿ ಧರ್ಮದ ವಿಷಬೀಜ ಬಿತ್ತುತ್ತಿದ್ದಾರೆ. ಭಗವದ್ಗೀತೆಯ ತತ್ವಕ್ಕೆ ವಿರುದ್ಧವಾಗಿ ಮನುಷ್ಯ ದ್ವೇಷ ಪಸರಿಸುತ್ತಿರುವ ಬಿಜೆಪಿಯವರು ನಿಜವಾದ ಧರ್ಮದ್ರೋಹಿಗಳು’ ಎಂದು ಆರೋಪ ಮಾಡಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

22 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago