ಬೆಂಗಳೂರು: “ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ, ಕೆಲವರು ಬದಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ ಆದರೆ ಕೊರೊನಾ ಸೋಂಕು ನಿಯಂತ್ರಣವಾಗದ ಕಾರಣ ಮಾರ್ಗಸೂಚಿಯಲ್ಲಿ ಬದಲಾವಣೆ ಇಲ್ಲ” ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಸರ್ಕಾರವು ಏಕಾಏಕಿ ಮಾರ್ಗಸೂಚಿ ತಂದಿಲ್ಲ. ತಾಂತ್ರಿಕ ಸಲಹಾ ಸಮಿತಿ ವರದಿ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದ್ದು, ಇದು ಏ.20ರವರೆಗೂ ಈಗಿನ ಮಾರ್ಗಸೂಚಿ ಅನ್ವಯವಾಗಲಿದೆ” ಎಂದರು.
ಬಂಟ್ವಾಳ : ಕೊರೊನಾ ಭೀತಿ – ಶ್ರೀ ಕ್ಷೇತ್ರ ಪೊಳಲಿ ಜಾತ್ರೆ ಸಾಂಕೇತಿಕವಾಗಿ ಆಚರಣೆ -Vishwanews24
“ನಾವು ಈಗ ಎರಡನೇ ಅಲೆ ಹೊಸ್ತಿಲಲ್ಲಿದ್ದು, ಕೊರೊನಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾದುದು ಅನಿವಾರ್ಯ. ನಮಗೆ ಬೇರೆ ದಾರಿಯೇ ಇಲ್ಲ. 45 ವರ್ಷ ಮೇಲ್ಪಟ್ಟವರೆಲ್ಲರು ದಯವಿಟ್ಟು ಲಸಿಕೆ ಪಡೆಯಬೇಕು, ಗುಂಪು ಸೇರುವುದನ್ನು ಕಡಿಮೆ ಮಾಡಿ ಮಾಸ್ಕ್ ಬಳಸಬೇಕು” ಎಂದರು.
ಇನ್ನು “ಶಾಲೆ, ಜಿಮ್, ಸ್ವಿಮ್ಮಿಂಗ್ ಪೂಲ್, ಮದುವೆ, ಅಪಾರ್ಟ್ಮೆಂಟ್ ಎಲ್ಲವೂ ತೆಗೆದರೆ ಕೊರೊನಾದಿಂದ ದೂರ ಇರುವುದಕ್ಕೆ ಸಾಧ್ಯವಿಲ್ಲ, ಹಾಗಾಗಿ ಈಗ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯ” ಎಂದು ಹೇಳಿದರು.
ಉಡುಪಿ ,ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳಲ್ಲಿ ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಶೇ.50 ನಿರ್ಬಂಧ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…