Featured

ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರಿಂದ  ಶಿಕ್ಷಣ ನಿಧಿಗೆ 2 ಕೋಟಿ ರೂ. ಚೆಕ್ ಹಸ್ತಾಂತರ – Vishwanews24

ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್

ಅವರಿಂದ  ಶಿಕ್ಷಣ ನಿಧಿಗೆ 2 ಕೋಟಿ ರೂ. ಚೆಕ್ ಹಸ್ತಾಂತರ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಧಿಯ ಚೆಕ್‍ನ್ನು ರಾಜ್ಯ ಸಹಕಾರ ಮಹಾಮಂಡಳಕ್ಕೆ ಹಸ್ತಾಂತರಿಸಲಾಯಿತು.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡರು, ಭಿನ್ನಾಭಿಪ್ರಾಯ ರಾಜಕೀಯವನ್ನು ಬಿಟ್ಟು, ಸಹಕಾರ ಕ್ಷೇತ್ರ ಉಳಿಸುವ ಕೆಲಸವನ್ನು ಮಾಡಬೇಕು. ಸಹಕಾರ ಕ್ಷೇತ್ರವನ್ನು ಮೆಟ್ಟಿಲಾಗಿ ಬಳಸಿಕೊಂಡು ರಾಜಕೀಯಕ್ಕೆ ಬರುತ್ತಾರೆ. ಶಾಸಕರು, ಸಚಿವರಾದ ಮೇಲೆ ಆ ಕ್ಷೇತ್ರವನ್ನು ಕಡೆಗಣಿಸಬಾರದು. ಎಲ್ಲರೂ ಒಟ್ಟಾಗಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ನಮಿಸಬೇಕು. ರಾಜಕೀಯ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಹಕಾರ ಕ್ಷೇತ್ರವನ್ನು ಉಳಿಸುವ ಕೆಲಸ ಮಾಡಬೇಕು. ಕೆಲವು ಸಹಕಾರ ಸಂಸ್ಥೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗುತ್ತಿರುವುದು ಸ್ವಾಗತಾರ್ಹ ಎಂದರು.

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ – Vishwanews24

ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿ, ಸಹಕಾರ ಕ್ಷೇತ್ರ ಪವಿತ್ರವಾದದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ಶಿಕ್ಷಣ ನಿಧಿಗೆ 2 ಕೋಟಿ ರೂ.ಗಳನ್ನು ಮಹಾಮಂಡಳದಿಂದ ನೀಡಲಾಗಿದೆ. 50 ಕಡೆಗಳಲ್ಲಿ ಚಿಲ್ಲರೆ ರೂಪದಲ್ಲಿ ರಸಗೊಬ್ಬರ, ಕೃಷಿ ಉತ್ಪನ್ನ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ಜನರಿಕ್ ಔಷಧದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು.

ಮಹಾಮಂಡಳದ ಸಿಬ್ಬಂದಿಗೆ ನಿವೃತ್ತಿ ಪಿಂಚಣಿ ಯೋಜನೆಯನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಕಮೀಷನ್ ಆಧಾರದ ಮೇಲೆ ಇತರೆ ಸಂಸ್ಥೆಗಳೊಂದಿಗೆ ವ್ಯವಹರಿಸುವುದು, ಇ-ಮಾರ್ಕೆಟ್ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಮಹಾಮಂಡಳದಲ್ಲಿ ಎ ಮತ್ತು ಬಿ ವರ್ಗದ 504 ಷೇರುದಾರರು ಇದ್ದು 9.02 ಕೋಟಿ ಷೇರು ಬಂಡವಾಳವಿದೆ. 417.42 ಲಕ್ಷದ ಗೊಬ್ಬರ ಮಾರಾಟ ಮಾಡಲಾಗಿದೆ. ಆಡಿಟ್‍ನಲ್ಲಿ ಬಿ ಗ್ರೇಡ್ ದೊರೆತಿದೆ ಎಂದು ಹೇಳಿದರು. ಸಹಕಾರ ಮಾರಾಟ ಮಹಾಮಂಡಳದ ಉಪಾಧಕ್ಷ ಪಾಟೀಲ್ ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಉದ್ಯೋಗದಲ್ಲೂ ಕ್ರೀಡಾಪಟುಗಳಿಗೆ ಶೇ.2 ಮೀಸಲು: ಸಿಎಂ ಬೊಮ್ಮಾಯಿ – Vishwanews24

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

16 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

22 minutes ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

34 minutes ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

16 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

16 hours ago