ಬೆಂಗಳೂರು : ಸಾರಿಗೆ ಇಲಾಖೆಯ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ನೌಕರರಿಗೆ ಶೇ. 15ರಷ್ಟು ವೇತನ ಹೆಚ್ಚಳ ಮಾಡಿ ಇಂದು ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೆಪಿಟಿಸಿಎಲ್ ಹಾಗೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಕೆಪಿಟಿಸಿಎಲ್ ನೌಕರರ ವೇತನ ಶೇ. 20 ರಷ್ಟು ಹೆಚ್ಚಳ ಮಾಡುತ್ತೇವೆ. ಸಾರಿಗೆ ನೌಕರರ ವೇತನ ಶೇ. 15 ರಷ್ಟು ಹೆಚ್ಚಳ ಮಾಡಿ ಇಂದೇ ಅಧಿಕೃತವಾಗಿ ಆದೇಶ ಹೊರಡಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರ ಒಕ್ಕೂಟವು ಇದೇ ಮಾರ್ಚ್ 21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಇದೀಗ ಸಾರಿಗೆ ನೌಕರರಿಗೆ ಶೇ. 15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…