ಬೆಂಗಳೂರು:ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ನಟ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.ಕುಟುಂಬಸ್ಥರು ಒಪ್ಪಿದರೆ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಎಲ್ಲಾ ವ್ಯವಸ್ಥೆಗಳೊಂದಿಗೆ ಸರ್ಕಾರ ತಯಾರಿ ಮಾಡಿಕೊಂಡು ಅದೇ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಿಕೊಡಲು ಒಪ್ಪಿಗೆ ಸೂಚಿಸಿದೆ.ಈಗ ಕುಟುಂಬಸ್ಥರು ಒಪ್ಪಿಗೆ ಸೂಚಿಸುತ್ತಾರಾ ನೊಡಬೇಕಿದೆ. ಕಂಠೀರವ ಸ್ಟುಡಿಯೋದಲ್ಲಿ ಮಾಡಬೇಕಾ ಅಥವಾ ಬೇರೆಡೆ ಮಾಡಬೇಕಾ ಎಂಬುದು ಅವರೇ ನಿರ್ಧರಿಸಬೇಕಿದೆ.
ಕಂಠೀರವ ಸ್ಟುಡಿಯೋದಲ್ಲಿ ನಟ ರಾಜ್ಕುಮಾರ್ ರವರ ಸಮಾಧಿ ಇದೆ.ಅಲ್ಲಿ ಪ್ರತಿ ವರ್ಷ ರಾಜ್ ರ ಹುಟ್ಟುಹಬ್ಬದಂದು ಮತ್ತು ನಿಧನರಾದ ದಿನದಂದು ಬಂದು ಪೂಜೆ ಸಲ್ಲಿಸುತ್ತಾರೆ.ಅವರನ್ನು ಗೌರವ ಸಲ್ಲಿಸಲು ಅಲ್ಲಿಗೆ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ .ಅದೊಂದು ದೇವಸ್ಥಾನ ರೂಪದಲ್ಲಿ ಮಾರ್ಪಟ್ಟಿದೆ.ಈಗ ಅದೇ ಜಾಗದಲ್ಲಿ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆ ಆಗಬೇಕು ಎಂಬುದು ಎಲ್ಲರ ಹೆಬ್ಬಯಕೆ.ಇನ್ನು ಕುಟುಂಬದವರು ಅಲ್ಲೇ ಅಂತ್ಯಕ್ರಿಯೆ ನಡೆಸಲು ಒಪ್ಪಿಗೆ ಸೂಚಿಸಿದರೆ ಅಪ್ಪಾಜಿ ಪಕ್ಕದಲ್ಲೇ ಪುನೀತ್ ರಾಜ್ಕುಮಾರ್ ರವರ ಅಂತ್ಯಕ್ರಿಯೆ ಜರುಗಲಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…