Featured

ರಾತ್ರಿ ಎಷ್ಟೇ ಬೇಗ ಮಲಗಿದ್ರೂ ನಿದ್ರೆ ಬರೋದಿಲ್ವಾ ….??? ಇದರಿಂದ ಏನೆಲ್ಲ ಅಪಾಯಗಳಿವೆ ಎಂಬುದು ನಿಮಗೆ ಗೊತ್ತಾ? Vishwanews24

ರಾತ್ರಿ ಎಷ್ಟೇ ಬೇಗ ಮಲಗಿದ್ರೂ ನಿದ್ರೆಯೇ ಬರೋದಿಲ್ಲ. ಬೆಳಗ್ಗೆ ಬೇಗ ಎದ್ದ ಆಫೀಸಿಗೆ ಹೋದರೆ ದಿನಪೂರ್ತಿ ಕಣ್ಣು ಉರಿ. ರಾತ್ರಿಯೆಲ್ಲ ನಿದ್ರೆ ಬರದೇ ಹೊರಳಾಡಿ ಸಾಕಾಗುತ್ತೆ. ನಿದ್ರೆ ಬರದ ಕಾರಣ ರಾತ್ರಿಯಿಡೀ ಮೊಬೈಲ್ ಹಿಡಿದುಕೊಂಡು ಕೂರೋ ಹಾಗಾಗಿದೆ’ ಇವೆಲ್ಲ ಇಂದಿನ ಪೀಳಿಗೆಯ ಹುಡುಗೀರ ಸಾಮಾನ್ಯ ಸಮಸ್ಯೆ. ನಿದ್ರೆ ಮಾಡಿದಷ್ಟೂ ಆರೋಗ್ಯ ಚೆನ್ನಾಗಿರುತ್ತದೆ. ಆದರೆ, ದಿನವಿಡೀ ಕಂಪ್ಯೂಟರ್ ಮುಂದೆ ಕುಳಿತು, ಮನೆಗೆ ಬಂದಕೂಡಲೆ ಟಿವಿ ಮುಂದೋ, ಮೊಬೈಲ್ ಹಿಡಿದೋ ಕೂರುವ ಇಂದಿನ ಕಾಲದವರಿಗೆ ನಿದ್ರೆ ಸ್ವಲ್ಪ ದೂರವೇ. ಆದರೆ, ಇದರಿಂದ ಏನೆಲ್ಲ ಅಪಾಯಗಳಿವೆ ಎಂಬುದು ನಿಮಗೆ ಗೊತ್ತಾ?

ನಾವು ಆರೋಗ್ಯಪೂರ್ಣವಾಗಿರಬೇಕು ಎಂದರೆ ಚೆನ್ನಾಗಿ ನಿದ್ರೆ ಮಾಡಬೇಕು. ದಿನವಿಡೀ ಕಾರ್ಯನಿರತವಾಗಿರುವ ದೇಹಕ್ಕೆ 7ರಿಂದ 8 ಗಂಟೆಯಾದರೂ ವಿಶ್ರಾಂತಿ ಬೇಕು. ಆಗ ಮಾತ್ರ ನಮ್ಮ ದೇಹವೆಂಬ ಯಂತ್ರ ಮಾರನೇ ದಿನ ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ಆ ಯಂತ್ರಕ್ಕೆ ಸರಿಯಾದ ವಿಶ್ರಾಂತಿ ಸಿಗಲಿಲ್ಲವೆಂದಾಗ ಸಮಸ್ಯೆಗಳು ಕಾಣಿಸಿಕೊಳ್ಳತೊಡಗುತ್ತವೆ. ಈ ಬಗ್ಗೆ ಸಂಶೋಧನೆಯೊಂದನ್ನು ನಡೆಸಲಾಗಿದ್ದು, ಅದರಿಂದ ಹೊರಬಿದ್ದ ಮಾಹಿತಿ ನಿದ್ರೆಗೆಡಿಸುವಂತಿದೆ.

ಕಡಿಮೆ ನಿದ್ರೆ ಮಾಡುವುದರಿಂದ ಮೂಳೆಯ ಖನಿಜ ಸಾಂದ್ರತೆ (ಬಿಎಂಡಿ) ಮತ್ತು ಆಸ್ಟಿಯೊಪೊರೋಸಿಸ್ ಬೆಳವಣಿಗೆಯ ಹೆಚ್ಚಿನ ಅಪಾಯದೊಂದಿಗೆ ಸಂಬಂಧ ಹೊಂದಿದೆ ಎಂದು ಸಂಶೋಧನೆಯೊಂದು ಹೇಳಿದೆ. ಆಸ್ಟಿಯೊಪೊರೋಸಿಸ್ ಸಮಸ್ಯೆಯಿಂದ ಮೂಳೆ ದುರ್ಬಲಗೊಳ್ಳುವುದರಿಂದ ಮೂಳೆ ಮುರಿಯುವ ಅಪಾಯವಿರಲಿದೆ ಎಂದು ಸಂಶೋಧಕರು ಹೇಳಿದ್ದಾರೆ. ನಮ್ಮ ಅಧ್ಯಯನದ ಪ್ರಕಾರ, ಕಡಿಮೆ ನಿದ್ರೆಯಿಂದ ಮೂಳೆಯ ಮೇಲೆ ನೆಗೆಟಿವ್ ಪರಿಣಾಮ ಬೀರುತ್ತದೆ ಎಂದು ಅಮೆರಿಕದ ಯುನಿವರ್ಸಿಟಿಯ ಈ ಅಧ್ಯಯನದ ಪ್ರಮುಖ ಲೇಖಕ ಹೀದರ್ ಓಚ್ಸ್-ಬಾಲ್ಕಾಮ್ ಹೇಳಿದ್ದಾರೆ. ಈ ಅಧ್ಯಯನಕ್ಕಾಗಿ ಋತುಮತಿಯರಾಗಿದ್ದ11,084 ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ರಾತ್ರಿ 5 ಗಂಟೆ ಅಥವಾ ಅದಕ್ಕಿಂತ ಕಡಿಮೆ ನಿದ್ರೆ ಮಾಡುವ ಮಹಿಳೆಯರು ಬಿಎಂಡಿ ಸಮಸ್ಯೆಗೆ ಒಳಗಾಗಿರುವುದು ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾತ್ರಿ ವೇಳೆ 5 ಗಂಟೆಗಿಂತ ಕಡಿಮೆ ನಿದ್ರೆ ಮಾಡುವ ಮಹಿಳೆಯರಲ್ಲಿ ಶೇ. 22ರಷ್ಟು ಜನ ಮೂಳೆಯ ಸಮಸ್ಯೆ ಮತ್ತು ಶೇ. 63ರಷ್ಟು ಮಹಿಳೆಯರು ಸೊಂಟದ ಆಸ್ಟಿಯೊಪೊರೋಸಿಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಹೀಗಾಗಿ, ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರು ನಿದ್ರಾಹೀನತೆಯಿಂದ ಸಾಕಷ್ಟು ಸಮಸ್ಯೆಗೆ ಒಳಗಾಗುತ್ತಾರೆ. ಆದ್ದರಿಂದ ಮಹಿಳೆಯರು ನಿದ್ರೆಗೆಡುವ ಮುನ್ನ ಎಚ್ಚರ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago