Featured

ರಾತ್ರಿ ಎಷ್ಟೇ ಬೇಗ ಮಲಗಿದ್ರೂ ನಿದ್ರೆ ಬರೋದಿಲ್ವಾ ….??? ಇದರಿಂದ ಏನೆಲ್ಲ ಅಪಾಯಗಳಿವೆ ಎಂಬುದು ನಿಮಗೆ ಗೊತ್ತಾ? Vishwanews24

ರಾತ್ರಿ ಎಷ್ಟೇ ಬೇಗ ಮಲಗಿದ್ರೂ ನಿದ್ರೆಯೇ ಬರೋದಿಲ್ಲ. ಬೆಳಗ್ಗೆ ಬೇಗ ಎದ್ದ ಆಫೀಸಿಗೆ ಹೋದರೆ ದಿನಪೂರ್ತಿ ಕಣ್ಣು ಉರಿ. ರಾತ್ರಿಯೆಲ್ಲ ನಿದ್ರೆ ಬರದೇ ಹೊರಳಾಡಿ ಸಾಕಾಗುತ್ತೆ. ನಿದ್ರೆ ಬರದ ಕಾರಣ ರಾತ್ರಿಯಿಡೀ ಮೊಬೈಲ್ ಹಿಡಿದುಕೊಂಡು ಕೂರೋ ಹಾಗಾಗಿದೆ’ ಇವೆಲ್ಲ ಇಂದಿನ ಪೀಳಿಗೆಯ ಹುಡುಗೀರ ಸಾಮಾನ್ಯ ಸಮಸ್ಯೆ. ನಿದ್ರೆ ಮಾಡಿದಷ್ಟೂ ಆರೋಗ್ಯ ಚೆನ್ನಾಗಿರುತ್ತದೆ. ಆದರೆ, ದಿನವಿಡೀ ಕಂಪ್ಯೂಟರ್ ಮುಂದೆ ಕುಳಿತು, ಮನೆಗೆ ಬಂದಕೂಡಲೆ ಟಿವಿ ಮುಂದೋ, ಮೊಬೈಲ್ ಹಿಡಿದೋ ಕೂರುವ ಇಂದಿನ ಕಾಲದವರಿಗೆ ನಿದ್ರೆ ಸ್ವಲ್ಪ ದೂರವೇ. ಆದರೆ, ಇದರಿಂದ ಏನೆಲ್ಲ ಅಪಾಯಗಳಿವೆ ಎಂಬುದು ನಿಮಗೆ ಗೊತ್ತಾ?

ನಾವು ಆರೋಗ್ಯಪೂರ್ಣವಾಗಿರಬೇಕು ಎಂದರೆ ಚೆನ್ನಾಗಿ ನಿದ್ರೆ ಮಾಡಬೇಕು. ದಿನವಿಡೀ ಕಾರ್ಯನಿರತವಾಗಿರುವ ದೇಹಕ್ಕೆ 7ರಿಂದ 8 ಗಂಟೆಯಾದರೂ ವಿಶ್ರಾಂತಿ ಬೇಕು. ಆಗ ಮಾತ್ರ ನಮ್ಮ ದೇಹವೆಂಬ ಯಂತ್ರ ಮಾರನೇ ದಿನ ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ಆ ಯಂತ್ರಕ್ಕೆ ಸರಿಯಾದ ವಿಶ್ರಾಂತಿ ಸಿಗಲಿಲ್ಲವೆಂದಾಗ ಸಮಸ್ಯೆಗಳು ಕಾಣಿಸಿಕೊಳ್ಳತೊಡಗುತ್ತವೆ. ಈ ಬಗ್ಗೆ ಸಂಶೋಧನೆಯೊಂದನ್ನು ನಡೆಸಲಾಗಿದ್ದು, ಅದರಿಂದ ಹೊರಬಿದ್ದ ಮಾಹಿತಿ ನಿದ್ರೆಗೆಡಿಸುವಂತಿದೆ.

ಕಡಿಮೆ ನಿದ್ರೆ ಮಾಡುವುದರಿಂದ ಮೂಳೆಯ ಖನಿಜ ಸಾಂದ್ರತೆ (ಬಿಎಂಡಿ) ಮತ್ತು ಆಸ್ಟಿಯೊಪೊರೋಸಿಸ್ ಬೆಳವಣಿಗೆಯ ಹೆಚ್ಚಿನ ಅಪಾಯದೊಂದಿಗೆ ಸಂಬಂಧ ಹೊಂದಿದೆ ಎಂದು ಸಂಶೋಧನೆಯೊಂದು ಹೇಳಿದೆ. ಆಸ್ಟಿಯೊಪೊರೋಸಿಸ್ ಸಮಸ್ಯೆಯಿಂದ ಮೂಳೆ ದುರ್ಬಲಗೊಳ್ಳುವುದರಿಂದ ಮೂಳೆ ಮುರಿಯುವ ಅಪಾಯವಿರಲಿದೆ ಎಂದು ಸಂಶೋಧಕರು ಹೇಳಿದ್ದಾರೆ. ನಮ್ಮ ಅಧ್ಯಯನದ ಪ್ರಕಾರ, ಕಡಿಮೆ ನಿದ್ರೆಯಿಂದ ಮೂಳೆಯ ಮೇಲೆ ನೆಗೆಟಿವ್ ಪರಿಣಾಮ ಬೀರುತ್ತದೆ ಎಂದು ಅಮೆರಿಕದ ಯುನಿವರ್ಸಿಟಿಯ ಈ ಅಧ್ಯಯನದ ಪ್ರಮುಖ ಲೇಖಕ ಹೀದರ್ ಓಚ್ಸ್-ಬಾಲ್ಕಾಮ್ ಹೇಳಿದ್ದಾರೆ. ಈ ಅಧ್ಯಯನಕ್ಕಾಗಿ ಋತುಮತಿಯರಾಗಿದ್ದ11,084 ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ರಾತ್ರಿ 5 ಗಂಟೆ ಅಥವಾ ಅದಕ್ಕಿಂತ ಕಡಿಮೆ ನಿದ್ರೆ ಮಾಡುವ ಮಹಿಳೆಯರು ಬಿಎಂಡಿ ಸಮಸ್ಯೆಗೆ ಒಳಗಾಗಿರುವುದು ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾತ್ರಿ ವೇಳೆ 5 ಗಂಟೆಗಿಂತ ಕಡಿಮೆ ನಿದ್ರೆ ಮಾಡುವ ಮಹಿಳೆಯರಲ್ಲಿ ಶೇ. 22ರಷ್ಟು ಜನ ಮೂಳೆಯ ಸಮಸ್ಯೆ ಮತ್ತು ಶೇ. 63ರಷ್ಟು ಮಹಿಳೆಯರು ಸೊಂಟದ ಆಸ್ಟಿಯೊಪೊರೋಸಿಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಹೀಗಾಗಿ, ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರು ನಿದ್ರಾಹೀನತೆಯಿಂದ ಸಾಕಷ್ಟು ಸಮಸ್ಯೆಗೆ ಒಳಗಾಗುತ್ತಾರೆ. ಆದ್ದರಿಂದ ಮಹಿಳೆಯರು ನಿದ್ರೆಗೆಡುವ ಮುನ್ನ ಎಚ್ಚರ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

12 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago