ನವದೆಹಲಿ,: ಇಡೀ ಸರ್ಜಿಕಲ್ ದಾಳಿ ಪ್ರಧಾನಿ ಮೋದಿ ಕಣ್ಗಾವಲಿನಲ್ಲೇ ನಡೆದಿದೆ. ಸೋಮವಾರ ರಾತ್ರಿ ಖಾಸಗಿ ಕಾರ್ಯಕ್ರಮ ಮುಗಿಸಿದ ಅವರು, ಅನಂತರ ಕಾರ್ಯಾಚರಣೆಯ ಉಸ್ತುವಾರಿ ವಹಿಸಿಕೊಂಡರು. ಕಾರ್ಯಾಚರಣೆ ವೇಳೆ ಪ್ರಧಾನಿ ಮೋದಿ ರಾತ್ರಿ ಇಡೀ ನಿದ್ದೆಗೆಟ್ಟು ಅಧಿಕಾರಿಗಳಿಂದ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದರು ಎಂದು ಹೇಳಲಾಗಿದೆ.
ಸರ್ಜಿಕಲ್ ಸ್ಚ್ರೈಕ್ 2.0 ಎಂದೇ ಹೇಳಲಾಗುತ್ತಿರುವ ವಾಯುಸೇನೆಯ ಪಿಒಕೆ ಮೇಲಿನ ದಾಳಿ ಸಂದರ್ಭದಲ್ಲಿ ಪ್ರಧಾನಿ ಮೋದಿ ಮುಂಜಾನೆವರೆಗೂ ನಿದ್ರೆ ಮಾಡಿರಲಿಲ್ಲವಂತೆ. ಈ ಬಗ್ಗೆ ಸರ್ಕಾರದ ಅಧಿಕೃತ ಮೂಲಗಳೇ ತಿಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ರಾತ್ರಿ ಇಡೀ ಎಚ್ಚರವಾಗಿದ್ದು ಅಧಿಕಾರಿಗಳಿಂದ ಕ್ಷಣ, ಕ್ಷಣದ ಮಾಹಿತಿ ಪಡೆಯುತ್ತಿದ್ದರು. ಅವರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕೂಡ ಸಾಥ್ ನೀಡಿದ್ದರು ಎನ್ನಲಾಗಿದೆ.
ಪುಲ್ವಾಮ ಉಗ್ರ ದಾಳಿ ಬಳಿಕ ಗಡಿಯಲ್ಲಿದ್ದ ಉಗ್ರರು ಭಾರತ ದಾಳಿ ಮಾಡುತ್ತದೆ ಎಂಬ ಭಯದಿಂದ ಉಗ್ರರ ಸ್ವರ್ಗವೆಂದೇ ಖ್ಯಾತಿಗಳಿಸಿರುವ ಬಾಲಾಕೋಟ್ ಉಗ್ರ ಕ್ಯಾಂಪ್ ಗೆ ತೆರಳಿದ್ದರು. ಈ ಮಾಹಿತಿ ಪಡೆದ ವಾಯುಸೇನೆ ಇದೇ ಸರಿಯಾದ ಸಂದರ್ಭ ಎಂದು ಇಂದು ಮುಂಜಾನೆ ದಾಳಿ ಮಾಡಿ ಬರೊಬ್ಬರಿ 350ಕ್ಕೂ ಹೆಚ್ಚು ಉಗ್ರರರನ್ನು ಹೊಡೆದುರುಳಿಸಿದೆ.
ಪ್ರಧಾನಿ ಮೋದಿ ಅವರು ದೆಹಲಿಯ ದಕ್ಷಿಣ ಬ್ಲಾಕ್ ನಲ್ಲಿರುವ ರಾಷ್ಟ್ರಪತಿ ಭವನದ ಕೋಣೆಯಲ್ಲಿ ಕುಳಿತು ವಾಯುಪಡೆ ಸಂಪೂರ್ಣ ಕಾರ್ಯಾಚರಣೆ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿದ್ದರು. ಕಾರ್ಯಾಚರಣೆ ಯಶಸ್ವಿಯಾಗಿ ಭಾರತೀಯ ವಾಯುಸೇನಾ ಸಿಬ್ಬಂದಿಗಳೆಲ್ಲರೂ ಯಾವುದೇ ತೊಂದರೆ ಇಲ್ಲದೆ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗಿದ್ದಾರೆ ಎಂದ ಬಳಿಕವಷ್ಟೆ ಪ್ರಧಾನಿ ಮೋದಿ 4.30ರ ಸುಮಾರಿಗೆ ತಮ್ಮ ನಿವಾಸದ ತೆರಳಿದರು. ಅದಕ್ಕೂ ಮೊದಲು ಯುದ್ಧ ವಿಮಾನಗಳ ನೇತೃತ್ವ ವಹಿಸಿಕೊಂಡ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…