Featured

ರಾತ್ರಿ ಹೇರಿರುವ ಕರ್ಪ್ಯೂ ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು : ಸಿದ್ದರಾಮಯ್ಯ -Vishwanews24

ರಾತ್ರಿ ಹೇರಿರುವ ಕರ್ಪ್ಯೂ ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ..

ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ..: ಸಿದ್ದರಾಮಯ್ಯ ವ್ಯಂಗ್ಯ -Vishwanews24

ಬೆಂಗಳೂರು,  (Vishwanews24): ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ 9 ನಗರದಲ್ಲಿ ಹೇರಿರುವ ಕರೋನಾ ಕರ್ಪ್ಯೂ ವಿರುದ್ದ ಕಿಡಿಕಾರಿದ್ದಾರೆ. ರಾತ್ರಿ ಹೇರಿರುವ ಕರ್ಪ್ಯೂ ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ಎಂದು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಸರಣಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ” ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ! ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ದ ವ್ಯಂಗ್ಯವಾಡಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠ ಮೋಹನ್ ಭಾಗವತ್ ಅವರಿಗೆ ಕೋವಿಡ್ ದೃಢ -Vishwanews24

ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಮುಖ್ಯಮಂತ್ರಿಗಳೇ ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ?ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಸಿಎಂ ಮತ್ತು ಆರೋಗ್ಯ ಸಚಿವ ಹೊಂದಿದ್ದರೆ,ಮೊದಲುಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಬೇಕು.ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿ ಬರತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ ಎಂದು ಸಲಹೆ ನೀಡಿದ್ದಾರೆ.

ಬೆಳಗಾವಿ : ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ -Vishwanews24

ದೇಶದ ಪ್ರಧಾನಿ ಅಂಧ ದರ್ಬಾರ್‌ನಿಂದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ವೈ ಸ್ಪೂರ್ತಿ ಪಡೆದರೆ,ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ.ಮುಖ್ಯಮಂತ್ರಿಗಳೇ, ಸ್ವಲ್ಪ ಬುದ್ದಿ ಕಲಿಯಿರಿ ಅವರಿಗೆ ಬುದ್ದಿ ಹೇಳಿ ಎಂದು ಹೇಳಿದ್ದಾರೆ

Vishwa News 24

Recent Posts

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

9 minutes ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

32 minutes ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

38 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

3 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago