ಬೆಂಗಳೂರು, (Vishwanews24): ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ 9 ನಗರದಲ್ಲಿ ಹೇರಿರುವ ಕರೋನಾ ಕರ್ಪ್ಯೂ ವಿರುದ್ದ ಕಿಡಿಕಾರಿದ್ದಾರೆ. ರಾತ್ರಿ ಹೇರಿರುವ ಕರ್ಪ್ಯೂ ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಸರಣಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ” ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ! ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ದ ವ್ಯಂಗ್ಯವಾಡಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠ ಮೋಹನ್ ಭಾಗವತ್ ಅವರಿಗೆ ಕೋವಿಡ್ ದೃಢ -Vishwanews24
ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಮುಖ್ಯಮಂತ್ರಿಗಳೇ ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ?ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಸಿಎಂ ಮತ್ತು ಆರೋಗ್ಯ ಸಚಿವ ಹೊಂದಿದ್ದರೆ,ಮೊದಲುಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಬೇಕು.ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿ ಬರತೊಡಗಿದೆ. ಗಿಮಿಕ್ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ ಎಂದು ಸಲಹೆ ನೀಡಿದ್ದಾರೆ.
ಬೆಳಗಾವಿ : ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ -Vishwanews24
ದೇಶದ ಪ್ರಧಾನಿ ಅಂಧ ದರ್ಬಾರ್ನಿಂದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ವೈ ಸ್ಪೂರ್ತಿ ಪಡೆದರೆ,ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ.ಮುಖ್ಯಮಂತ್ರಿಗಳೇ, ಸ್ವಲ್ಪ ಬುದ್ದಿ ಕಲಿಯಿರಿ ಅವರಿಗೆ ಬುದ್ದಿ ಹೇಳಿ ಎಂದು ಹೇಳಿದ್ದಾರೆ
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…