ಮೈಸೂರು: ‘ರಾತ್ರಿ ಎಂಟು ಗಂಟೆಗೆ ಬಾಗಿಲು ಮುಚ್ಚುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಗುರುವಾರ, ಶುಕ್ರವಾರ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ, ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಇಲ್ಲಿ ಹೇಳಿದರು.
ಅರಮನೆ ಆವರಣದಲ್ಲಿ ಮಾವುತರು ಮತ್ತು ಕಾವಾಡಿಗರಿಗೆ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಭಾಗವಹಿಸಿದ ಬಳಿಕ ಸಚಿವರು ಪತ್ರಕತ೯ರೊಂದಿಗೆ ಮಾತನಾಡಿದರು.
‘ಚಾಮುಂಡೇಶ್ವರಿ ದೇವಸ್ಥಾನವನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುತ್ತಿತ್ತು. ನಗರದ ದೀಪಾಲಂಕಾರ ನೋಡಿಕೊಂಡು ದೇವಸ್ಥಾನಕ್ಕೆ ತೆರಳುವವರು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲೆಂದು ಶುಕ್ರವಾರದವರೆಗೆ ರಾತ್ರಿ 10 ಗಂಟೆಯವರೆಗೆ ದರ್ಶನದ ಅವಧಿ ವಿಸ್ತರಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವೆ’ ಎಂದು ತಿಳಿಸಿದರು.
‘ಜಂಬೂಸವಾರಿಗೆ ಎಲ್ಲ ಸಿದ್ಧತೆ ಆಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸದೆ 500 ಜನರಿಗೆ ಜಂಬೂಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಕೆಲವರು ಒಂದು ವಾರ, ಮತ್ತೆ ಕೆಲವರು ದೀಪಾವಳಿವರೆಗೆ ದೀಪಾಲಂಕಾರ ವಿಸ್ತರಣೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸೋಮಶೇಖರ್ ಹೇಳಿದರು.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…