Featured

ರಾತ್ರೋ ರಾತ್ರಿ ನಟ ದುನಿಯಾ ವಿಜಯ್ ಬಂಧನ !

ಬೆಂಗಳೂರು: ನಗರದ ಅಂಬೇಡ್ಕರ್‌ ಭವನದಲ್ಲಿ  ಶನಿವಾರ ರಾತ್ರಿ ನಡೆದ ಜಗಳವೊಂದು ಘರ್ಷಣೆಗೆ ತಿರುಗಿ ಖ್ಯಾತ ನಟ ದುನಿಯಾ ವಿಜಯ್‌ ಮತ್ತು ಬೆಂಬಲಿಗರ ಬಂಧನಕ್ಕೆ ಕಾರಣವಾಗಿದೆ.

ಜಿಮ್‌ ಟ್ರೈನರ್‌ ಆಗಿರುವ ಪಾನಿಪುರಿ ಕಿಟ್ಟಿ ಅವರ ತಮ್ಮನ ಮಗ ಮಾರುತಿ ಗೌಡ ಎನ್ನುವ ಯುವಕನನ್ನು ದುನಿಯಾ ವಿಜಿ ಮತ್ತು ಮೂವರು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ.

ಅಂಬೇಡ್ಕರ್‌ ಭವನದಲ್ಲಿ ಬಾಡಿ ಬಿಲ್ಡಿಂಗ್‌ ಸ್ಪರ್ಧೆ ನಡೆಯುತ್ತಿದ್ದ ವೇಳೆ ಜಗಳ ಆರಂಭವಾಗಿದ್ದು ಆ ಬಳಿಕ ಮಾರುತಿಗೆ ದುನಿಯಾ ವಿಜಿ ಅವಾಚ್ಯ ಶಬ್ಧಗಳಿಂದ ಬೈದು ಕಾರಿನಲ್ಲಿ ಅಪಹರಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ.

ತಕ್ಷಣ ಪೊಲೀಸರಿಗೆ ದೂರು ನೀಡಲಾಗಿದ್ದು , ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ದುನಿಯಾ ವಿಜಯ್‌ ಸೇರಿ ಮೂವರನ್ನು ಬಂಧಿಸಿದ್ದಾರೆ.

ನಡೆದಿದ್ದೇನು?
ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಕಾಂಪಿಟೇಷನ್ ನೋಡಲು ದುನಿಯಾ ವಿಜಿ ಮತ್ತು ತಂಡ ಬಂದಿತ್ತು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿದೆ. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿದ್ದಾರೆ. ದುನಿಯಾ ವಿಜಿ, ಮಣಿ ಮತ್ತು ಪ್ರಸಾದ್ ಸಹಚರರಿಂದ ಈ ಕೃತ್ಯ ನಡೆದಿದೆ.

ಮಾರುತಿಗೌಡ ಸಹಚರರಿಂದ ದೂರು ಪಡೆದ ಹೈಗ್ರೌಂಡ್ ಪೊಲೀಸರು ಮೊದಲಿಗೆ ದುನಿಯಾ ವಿಜಯ್‍ಗೆ ಕರೆ ಮಾಡಿ ಎಚ್ಚರಿಸಿದ್ದಾರೆ. 30 ನಿಮಿಷದ ನಂತರ ಕಿಡ್ನಾಪ್ ಮಾಡಿದ್ದ ಮಾರುತಿಗೌಡನೊಂದಿಗೆ ದುನಿಯಾ ವಿಜಯ್ ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಪ್ರತ್ಯಕ್ಷನಾಗಿದ್ದಾರೆ. ಜೊತೆಗೆ ಹಲ್ಲೆ ಮಾಡಿದ್ದ ಜಿಮ್ ಟ್ರೇನರ್ ಮಾರುತಿಗೌಡನ್ನ ಕರೆದುಕೊಂಡು ಬಂದಿದ್ದರು. ಆದರೆ ದುನಿಯಾ ವಿಜಯ್ ಪೋಲೀಸ್ ಠಾಣೆಯೂ ಬಳಿಯೂ ದರ್ಪ ತೋರಿದ್ದು, ಅವಾಚ್ಯ ಶಬ್ಧಗಳಿಂದ ಮತ್ತೆ ಪಾನಿಪುರಿ ಕಿಟ್ಟಿ ಹಾಗೂ ಹುಡುಗರನ್ನ ಬೈದಿದ್ದಾರೆ.

ಇದೇ ವೇಳೆ ಪಾನಿಪುರಿ ಕಿಟ್ಟಿ ಹುಡುಗರು, ದುನಿಯ್ ವಿಜಿ ಕಾರ್ ನ ಮೇಲೆ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಹೈಗ್ರೌಂಡ್ ಪೊಲೀಸ್ ಠಾಣೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಕೆಎಸ್‍ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಪೊಲೀಸ್ ಠಾಣೆ ಬಳಿಯೂ ದರ್ಪ ಮೆರೆಯುತ್ತಿದ್ದ ವಿಜಿಗೆ ಎಸಿಪಿ ರವಿಶಂಕರ್ ಖಡಕ್ ವಾರ್ನಿಂಗ್ ಮಾಡಿದ್ದಾರೆ.

ಈ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ದುನಿಯ್ ವಿಜಯ್ ಹಾಗೂ ಸಹಚರರನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 365, 342, 325, 506ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹೈಗ್ರೌಂಡ್ ಪೊಲೀಸರು ದುನಿಯ್ ವಿಜಯ್ ನನ್ನ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago