ಬೆಂಗಳೂರು: ರಾಮನಗರ ಉಪಚುನಾವಣೆಯಿಂದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಹಿಂದೆ ಸರಿದಿದ್ದಾರೆ.
ಗುರುವಾರ ಬೆಳಗ್ಗೆ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಜೆಡಿಎಸ್ ಅಭ್ಯರ್ಥಿಯಾಗಿರುವ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.
ಮಂಡ್ಯಕ್ಕೆ ಬಿಜೆಪಿ ಪ್ರಮುಖ ನಾಯಕರೆಲ್ಲರೂ ಪ್ರಚಾರಕ್ಕೆ ತೆರಳುತ್ತಿದ್ದಾರೆ. ನನ್ನ ಪರವಾಗಿ ಇದುವರೆಗೂ ಯಾರು ಬಂದು ಪ್ರಚಾರ ಮಾಡಿಲ್ಲ, ಯಡಿಯೂರಪ್ಪನವರು ಒಂದೇ ಒಂದು ದಿನ ನನ್ನ ಜೊತೆ ಮಾತನಾಡಿಲ್ಲ, ಯೋಗೀಶ್ವರ್ ಸರ್ಕಾರ ಬೀಳಿಸುತ್ತೇನೆ ಎಂದು ಹೇಳಿದ್ರು, ಚುನಾವಣೆಯ ಸಂಪೂರ್ಣ ಖರ್ಚು ವೆಚ್ಚ ಭರಿಸುವುದಾಗಿ ಹೇಳಿದರು, ಆದರೆ ಬಿಜೆಪಿಯಲ್ಲಿ ಯಾರನ್ನು ಕಂಡರೆ ಯಾರಿಗೂ ಆಗುವುದಿಲ್ಲ, ಯಾರೂ ಇಲ್ಲಿ ಕಾರು ನಿಲ್ಲಿಸಿ ಸ್ವಲ್ಪ ಪ್ರಚಾರವೂ ನಡೆಸಿಲ್ಲ ಎಂದಿದ್ದಾರೆ.
ನಾನು ಮೂಲತಃ ಕಾಂಗ್ರೆಸಿಗ ಮತ್ತೆ ಮಾತೃ ಪಕ್ಷವನ್ನು ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಎಲ್ ಚಂದ್ರಶೇಖರ್ ಅವರಿಗೆ ಬಿಜೆಪಿ ಬಿ ಫಾರಂ ನೀಡಿತ್ತು.
ಜಾಹೀರಾತುಗಳು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…