ಬೆಂಗಳೂರು: ರಾಮನಗರ ಉಪಚುನಾವಣೆಯಿಂದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಹಿಂದೆ ಸರಿದಿದ್ದಾರೆ.
ಗುರುವಾರ ಬೆಳಗ್ಗೆ ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಜೆಡಿಎಸ್ ಅಭ್ಯರ್ಥಿಯಾಗಿರುವ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.
ಮಂಡ್ಯಕ್ಕೆ ಬಿಜೆಪಿ ಪ್ರಮುಖ ನಾಯಕರೆಲ್ಲರೂ ಪ್ರಚಾರಕ್ಕೆ ತೆರಳುತ್ತಿದ್ದಾರೆ. ನನ್ನ ಪರವಾಗಿ ಇದುವರೆಗೂ ಯಾರು ಬಂದು ಪ್ರಚಾರ ಮಾಡಿಲ್ಲ, ಯಡಿಯೂರಪ್ಪನವರು ಒಂದೇ ಒಂದು ದಿನ ನನ್ನ ಜೊತೆ ಮಾತನಾಡಿಲ್ಲ, ಯೋಗೀಶ್ವರ್ ಸರ್ಕಾರ ಬೀಳಿಸುತ್ತೇನೆ ಎಂದು ಹೇಳಿದ್ರು, ಚುನಾವಣೆಯ ಸಂಪೂರ್ಣ ಖರ್ಚು ವೆಚ್ಚ ಭರಿಸುವುದಾಗಿ ಹೇಳಿದರು, ಆದರೆ ಬಿಜೆಪಿಯಲ್ಲಿ ಯಾರನ್ನು ಕಂಡರೆ ಯಾರಿಗೂ ಆಗುವುದಿಲ್ಲ, ಯಾರೂ ಇಲ್ಲಿ ಕಾರು ನಿಲ್ಲಿಸಿ ಸ್ವಲ್ಪ ಪ್ರಚಾರವೂ ನಡೆಸಿಲ್ಲ ಎಂದಿದ್ದಾರೆ.
ನಾನು ಮೂಲತಃ ಕಾಂಗ್ರೆಸಿಗ ಮತ್ತೆ ಮಾತೃ ಪಕ್ಷವನ್ನು ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಎಲ್ ಚಂದ್ರಶೇಖರ್ ಅವರಿಗೆ ಬಿಜೆಪಿ ಬಿ ಫಾರಂ ನೀಡಿತ್ತು.
ಜಾಹೀರಾತುಗಳು
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…