Featured

‘ರಾಮನಾಗಿ ಬದುಕುವುದೇ ರಾಮರಾಜ್ಯ , ಇದು ಸನಾತನ ಹಿಂದೂ ಧರ್ಮ : ವಿನಯ ಗುರೂಜಿ -Vishwanews24

ಉಳ್ಳಾಲ: ‘ರಾಮನಾಗಿ ಬದುಕುವುದೇ ರಾಮರಾಜ್ಯ, ರಾಮನ ಆದರ್ಶಗಳನ್ನು ಮೈಗೂಡಿಸಿ ಬದುಕುವುದೇ ಧರ್ಮ. ಅಹಂಕಾರವನ್ನು ಕಳೆದುಕೊಳ್ಳುವವನೇ ಗುರು. ಇದು ಸನಾತನ ಹಿಂದೂ ಧರ್ಮ’ ಎಂದು ಕೊಪ್ಪ ದತ್ತ ಆಶ್ರಮದ ವಿನಯ ಗುರೂಜಿ ಅಭಿಪ್ರಾಯಪಟ್ಟರು.

ಹಿಂದೂ ಜಾಗರಣ ವೇದಿಕೆ , ಓಂ ಶಕ್ತಿ ಘಟಕ ಕುಂಪಲ ಆಶ್ರಯದಲ್ಲಿ ನವೋದಯ ಮೈದಾನ ಮೂರುಕಟ್ಟೆಯಲ್ಲಿ ಜರುಗಿದ 10ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಸಭೆಯಲ್ಲಿ ಅವರು ಮಾತನಾಡಿದರು.

‘ಹಿಂದೂ ಧರ್ಮದ ದ್ವೈತ್ವವನ್ನು ಬೈಬಲ್, ಕುರಾನ್‌ನಲ್ಲಿ ಹೇಳಲಾಗಿದೆ. ಆದರೆ ಇದನ್ನು ಒಪ್ಪಲು ಸಿದ್ಧರಿಲ್ಲ.  ಶಾಸ್ತ್ರ ವನ್ನು ಮೀರಿರುವುದು ಸತ್ಯ. ಭೌತಿಕವಾಗಿ ಗಟ್ಟಿ ಇರುವ ಹಿಂದೂಗಳು ತಾತ್ವಿಕವಾಗಿ ಇಲ್ಲ. ಇತರ ಧರ್ಮಗಳಲ್ಲಿ ಗ್ರಂಥಾಧ್ಯಯನ ಇದೆ. ಆದರೆ ಹಿಂದೂಗಳು ಗ್ರಂಥಗಳನ್ನು ಷೋಕೇಸ್‌ನಲ್ಲಿ ಹೂಗಳನ್ನಿಟ್ಟು ಪೂಜೆ ಮಾಡಲು ಮಾತ್ರ ಸೀಮಿತಿವಾಗಿರಿಸಲಾಗಿದೆ. ಕೇಸರಿ ಬಟ್ಟೆ ಉಡುವುದಷ್ಟೇ ಸನ್ಯಾಸವಲ್ಲ. ಆಸೆಗಳನ್ನು ಗೆಲ್ಲುವುದು ಕೂಡ ಸನ್ಯಾಸ’ ಎಂದರು.

‘ಧರ್ಮದ ಅಳಿವಿಗೆ ಕಾರಣ. ಜಾತಿ, ಬಡವ ಶ್ರಿಮಂತ , ಮಡಿ ಮೈಲಿಗೆ ಎಲ್ಲವನ್ನೂ ದೂರವಾಗಿರಿಸಬೇಕು. ಧಾರ್ಮಿಕ, ಲೌಕಿಕ ಶಿಕ್ಷಣ ಹಾಗೂ ದೇವಸ್ಥಾನದ ಹಣವನ್ನು ಬಡವರಿಗೆ ವಿನಿಯೋಗಿಸುವುದರಿಂದ ಸಮಾಜದ ಏಳಿಗೆಯೂ ಸಾಧ್ಯ’ ಎಂದರು.

ಉಳ್ಳಾಲ್ತಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಕುತ್ತಾರ್ ಅಧ್ಯಕ್ಷತೆ  ವಹಿಸಿದ್ದರು. ಹಿಂದೂ ಜಾಗರಣ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ .ಕೆ ಶಕ್ತಿನಗರ, ಉದ್ಯಮಿಗಳಾದ ಹರೀಶ್ ಶೆಟ್ಟಿ, ಅರವಿಂದ್ ಬೆಂಗ್ರೆ, ಸುಜಿತ್ ಕಂಬ್ಳಪದವು, ಗುರುಪ್ರಸಾದ್ ಭಟ್, ತಿರುಮಲೇಶ್ವರ್ ಭಟ್, ವಕೀಲ ಮಹೇಶ್ ಜೋಗಿ, ಮುಖ್ಯ ಅತಿಥಿಗಳಾಗಿದ್ದರು.  ಸಾಮಾಜಿಕ ಕಾರ್ಯಕರ್ತೆ ಪ್ರಭಾ ವಿಠಲ್, ವೇದಿಕೆ ಪ್ರಖಂಡದ ಸಂಚಾಲಕ ಪ್ರಕಾಶ್ ಕುಂಪಲ , ಕುಂಪಲ ಮೊಸರುಕುಡಿಕೆ ಉತ್ಸವದ ಗೌರವಾಧ್ಯಕ್ಷ ಸೋಮೇಶೇಖರ್ ಕೆ. ಜಗತಾಪು , ಪ್ರವೀಣ್.ಯಸ್ ಕುಂಪಲ  ಇದ್ದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

3 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

3 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

3 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

4 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

5 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

5 hours ago