ಉಳ್ಳಾಲ: ‘ರಾಮನಾಗಿ ಬದುಕುವುದೇ ರಾಮರಾಜ್ಯ, ರಾಮನ ಆದರ್ಶಗಳನ್ನು ಮೈಗೂಡಿಸಿ ಬದುಕುವುದೇ ಧರ್ಮ. ಅಹಂಕಾರವನ್ನು ಕಳೆದುಕೊಳ್ಳುವವನೇ ಗುರು. ಇದು ಸನಾತನ ಹಿಂದೂ ಧರ್ಮ’ ಎಂದು ಕೊಪ್ಪ ದತ್ತ ಆಶ್ರಮದ ವಿನಯ ಗುರೂಜಿ ಅಭಿಪ್ರಾಯಪಟ್ಟರು.
ಹಿಂದೂ ಜಾಗರಣ ವೇದಿಕೆ , ಓಂ ಶಕ್ತಿ ಘಟಕ ಕುಂಪಲ ಆಶ್ರಯದಲ್ಲಿ ನವೋದಯ ಮೈದಾನ ಮೂರುಕಟ್ಟೆಯಲ್ಲಿ ಜರುಗಿದ 10ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಸಭೆಯಲ್ಲಿ ಅವರು ಮಾತನಾಡಿದರು.
‘ಹಿಂದೂ ಧರ್ಮದ ದ್ವೈತ್ವವನ್ನು ಬೈಬಲ್, ಕುರಾನ್ನಲ್ಲಿ ಹೇಳಲಾಗಿದೆ. ಆದರೆ ಇದನ್ನು ಒಪ್ಪಲು ಸಿದ್ಧರಿಲ್ಲ. ಶಾಸ್ತ್ರ ವನ್ನು ಮೀರಿರುವುದು ಸತ್ಯ. ಭೌತಿಕವಾಗಿ ಗಟ್ಟಿ ಇರುವ ಹಿಂದೂಗಳು ತಾತ್ವಿಕವಾಗಿ ಇಲ್ಲ. ಇತರ ಧರ್ಮಗಳಲ್ಲಿ ಗ್ರಂಥಾಧ್ಯಯನ ಇದೆ. ಆದರೆ ಹಿಂದೂಗಳು ಗ್ರಂಥಗಳನ್ನು ಷೋಕೇಸ್ನಲ್ಲಿ ಹೂಗಳನ್ನಿಟ್ಟು ಪೂಜೆ ಮಾಡಲು ಮಾತ್ರ ಸೀಮಿತಿವಾಗಿರಿಸಲಾಗಿದೆ. ಕೇಸರಿ ಬಟ್ಟೆ ಉಡುವುದಷ್ಟೇ ಸನ್ಯಾಸವಲ್ಲ. ಆಸೆಗಳನ್ನು ಗೆಲ್ಲುವುದು ಕೂಡ ಸನ್ಯಾಸ’ ಎಂದರು.
‘ಧರ್ಮದ ಅಳಿವಿಗೆ ಕಾರಣ. ಜಾತಿ, ಬಡವ ಶ್ರಿಮಂತ , ಮಡಿ ಮೈಲಿಗೆ ಎಲ್ಲವನ್ನೂ ದೂರವಾಗಿರಿಸಬೇಕು. ಧಾರ್ಮಿಕ, ಲೌಕಿಕ ಶಿಕ್ಷಣ ಹಾಗೂ ದೇವಸ್ಥಾನದ ಹಣವನ್ನು ಬಡವರಿಗೆ ವಿನಿಯೋಗಿಸುವುದರಿಂದ ಸಮಾಜದ ಏಳಿಗೆಯೂ ಸಾಧ್ಯ’ ಎಂದರು.
ಉಳ್ಳಾಲ್ತಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಕುತ್ತಾರ್ ಅಧ್ಯಕ್ಷತೆ ವಹಿಸಿದ್ದರು. ಹಿಂದೂ ಜಾಗರಣ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ .ಕೆ ಶಕ್ತಿನಗರ, ಉದ್ಯಮಿಗಳಾದ ಹರೀಶ್ ಶೆಟ್ಟಿ, ಅರವಿಂದ್ ಬೆಂಗ್ರೆ, ಸುಜಿತ್ ಕಂಬ್ಳಪದವು, ಗುರುಪ್ರಸಾದ್ ಭಟ್, ತಿರುಮಲೇಶ್ವರ್ ಭಟ್, ವಕೀಲ ಮಹೇಶ್ ಜೋಗಿ, ಮುಖ್ಯ ಅತಿಥಿಗಳಾಗಿದ್ದರು. ಸಾಮಾಜಿಕ ಕಾರ್ಯಕರ್ತೆ ಪ್ರಭಾ ವಿಠಲ್, ವೇದಿಕೆ ಪ್ರಖಂಡದ ಸಂಚಾಲಕ ಪ್ರಕಾಶ್ ಕುಂಪಲ , ಕುಂಪಲ ಮೊಸರುಕುಡಿಕೆ ಉತ್ಸವದ ಗೌರವಾಧ್ಯಕ್ಷ ಸೋಮೇಶೇಖರ್ ಕೆ. ಜಗತಾಪು , ಪ್ರವೀಣ್.ಯಸ್ ಕುಂಪಲ ಇದ್ದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…