Featured

ರಾಮನೂರು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ರಾಮನೂರು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಿ ಮೋದಿ  ಅವರು ರಾಮನೂರು ಅಯೋಧ್ಯೆಗೆ ಆಗಮಿಸಿದ್ದಾರೆ. ನೂತನ ವಿಮಾನ ನಿಲ್ದಾಣ ಹಾಗೂ ಅಭಿವೃದ್ಧಿಪಡಿಸಿದ ರೈಲ್ವೆ ನಿಲ್ದಾಣ ಉದ್ಘಾಟನೆ ನೆರವೇರಿಸುವುದಕ್ಕೂ ಮುನ್ನ ಸುಮಾರು 15 ಕಿಮೀ ರೋಡ್‌ ಶೋ ಹಮ್ಮಿಕೊಂಡಿದ್ದು, ಈಗಾಗಲೇ ರೋಡ್‌ ಶೋ ಆರಂಭಿಸಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ 10.45ರ ಸುಮಾರಿಗೆ ಅವರು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ  ಆಗಮಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಶಾಲುಹೊದಿಸಿ ಪ್ರಧಾನ ಮಂತ್ರಿಯನ್ನು ಸ್ವಾಗತಿಸಿದರು.

ರೋಡ್‌ ಶೋ ನಂತರ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ. ಪ್ರಧಾನಿ ರೋಡ್‌ ಶೋ ನಡೆಯಲಿರುವ ರಸ್ತೆಯ ಎರಡೂ ಕಡೆಗಳಲ್ಲಿ ಸಾವಿರಾರು ಜನ ನೆರೆದು ಮೋದಿಯವರನ್ನು ಪುಷ್ಪಾರ್ಚನೆ ಹಾಗೂ ಜಯಘೋಷಗಳಿಂದ ಸ್ವಾಗತಿಸಿದರು. ದೇಶದ ನಾನಾ ಕಡೆಗಳಿಂದ ಬಂದ ಸಾಂಸ್ಕೃತಿಕ ಕಲಾ ತಂಡಗಳು ದಾರಿಯುದ್ದಕ್ಕೂ ತಮ್ಮ ಕಲಾ ಪ್ರದರ್ಶನಗಳನ್ನು ನೀಡಿ ನೋಡುಗರ ಮನಸೂರೆಗೊಂಡವು. ಸುಮಾರು 1,400 ಕಲಾವಿದರು 40ಕ್ಕೂ ಹೆಚ್ಚು ವೇದಿಕೆಗಳಲ್ಲಿ ಸಾಂಸ್ಕೃತಿಕ ನೃತ್ಯ ಪ್ರದರ್ಶನದೊಂದಿಗೆ ಪ್ರಧಾನಿಗಳನ್ನು ಸ್ವಾಗತಿಸಿದವು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

14 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago