ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿದೆ. ಆದರೀಗ ಇದರ ಬೆನ್ನಲ್ಲೇ ಚುನಾವಣೆಗೂ ಮೊದಲು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳೂ ಸದ್ದು ಮಾಡಲಾರಂಭಿಸಿವೆ. ಅಲ್ಲದೇ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳನ್ನು ಶೀಘ್ರವಾಗಿ ಪೂರೈಸಿ ಎಂಬ ಒತ್ತಾಯ ಹೆಚ್ಚಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 542 ಕ್ಷೇತ್ರಗಳ ಪೈಕಿ 303ನ್ನು ಗೆದ್ದ ಬಳಿಕ ಮೊದಲ ಬಾರಿ ಮಾತನಾಡಿದ RSS ಮುಖ್ಯಸ್ಥ ಮೋಹನ್ ಭಾಗವತ್ ”’ರಾಮನ ಕೆಲಸ ನಾವೇ ವಹಿಸಿಕೊಂಡರೆ, ಅದನ್ನು ನಾವೇ ಮಾಡಿ ಮುಗಿಸುತ್ತೇವೆ. ಬೇರೆಯವರಿಗೆ ವಹಿಸಿದರೆ, ಆ ಕೆಲಸ ಮಾಡುವ ವ್ಯಕ್ತಿಯ ಮೇಲೆ ನಿಗಾ ಇರಿಸಬೇಕಾಗುತ್ತದೆ. ಬಹುದಿನಗಳಿಂದ ವಿಳಂಬಗೊಂಡ ಕೆಲಸವನ್ನು ಮಾಡಿ ಮುಗಿಸುವ ಕಡೆ ಮುತುವರ್ಜಿ ವಹಿಸಬೇಕಿದೆ,” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ನಾವು ಯಾವುದನ್ನು ಬಯಸುತ್ತೇವೋ ಅದನ್ನು ಪಡೆಯಲು ನಾವು ಕಾಯಬೇಕಾಗುತ್ತದೆ. ಅಲ್ಲದೇ ನ್ಮಮ ಗುರಿ ತಲುಪಲು ಸಹಾಯ ಮಾಡುವವರಿಗೆ ನಾವು ಸಹಾಯ ಮಾಡಬೇಕು ಎಂದಿದ್ದಾರೆ. RSS ಆರಂಭದಿಂದಲೂ ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಿಸಬೇಕೆಂಬ ಹಂಬಲ ಹೊಂದಿದೆ ಎಂಬುವುದು ಉಲ್ಲೇಖನೀಯ. ಇದೀಗ ಬಿಜೆಪಿ ಲೋಕ ಸಮರದಲ್ಲಿ ಜಯ ಗಳಿಸಿದ ಬೆನ್ನಲ್ಲೇ ರಾಮ ಮಂದಿರ ನಿರ್ಮಿಸಲು ಒತ್ತಡ ಹೇರಲಾರಂಭಿಸಿದೆ.
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…