Featured

ರಾಮನ ಕೆಲಸ ನಾವೇ ವಹಿಸಿಕೊಂಡರೆ, ಅದನ್ನು ನಾವೇ ಮಾಡಿ ಮುಗಿಸುತ್ತೇವೆ : ಮೋಹನ್ ಭಾಗವತ್ -Vishwanews24

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿದೆ. ಆದರೀಗ ಇದರ ಬೆನ್ನಲ್ಲೇ ಚುನಾವಣೆಗೂ ಮೊದಲು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳೂ ಸದ್ದು ಮಾಡಲಾರಂಭಿಸಿವೆ. ಅಲ್ಲದೇ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳನ್ನು ಶೀಘ್ರವಾಗಿ ಪೂರೈಸಿ ಎಂಬ ಒತ್ತಾಯ ಹೆಚ್ಚಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 542 ಕ್ಷೇತ್ರಗಳ ಪೈಕಿ 303ನ್ನು ಗೆದ್ದ ಬಳಿಕ ಮೊದಲ ಬಾರಿ ಮಾತನಾಡಿದ RSS ಮುಖ್ಯಸ್ಥ ಮೋಹನ್ ಭಾಗವತ್ ”’ರಾಮನ ಕೆಲಸ ನಾವೇ ವಹಿಸಿಕೊಂಡರೆ, ಅದನ್ನು ನಾವೇ ಮಾಡಿ ಮುಗಿಸುತ್ತೇವೆ. ಬೇರೆಯವರಿಗೆ ವಹಿಸಿದರೆ, ಆ ಕೆಲಸ ಮಾಡುವ ವ್ಯಕ್ತಿಯ ಮೇಲೆ ನಿಗಾ ಇರಿಸಬೇಕಾಗುತ್ತದೆ. ಬಹುದಿನಗಳಿಂದ ವಿಳಂಬಗೊಂಡ ಕೆಲಸವನ್ನು ಮಾಡಿ ಮುಗಿಸುವ ಕಡೆ ಮುತುವರ್ಜಿ ವಹಿಸಬೇಕಿದೆ,” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ನಾವು ಯಾವುದನ್ನು ಬಯಸುತ್ತೇವೋ ಅದನ್ನು ಪಡೆಯಲು ನಾವು ಕಾಯಬೇಕಾಗುತ್ತದೆ. ಅಲ್ಲದೇ ನ್ಮಮ ಗುರಿ ತಲುಪಲು ಸಹಾಯ ಮಾಡುವವರಿಗೆ ನಾವು ಸಹಾಯ ಮಾಡಬೇಕು ಎಂದಿದ್ದಾರೆ. RSS ಆರಂಭದಿಂದಲೂ ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಿಸಬೇಕೆಂಬ ಹಂಬಲ ಹೊಂದಿದೆ ಎಂಬುವುದು ಉಲ್ಲೇಖನೀಯ. ಇದೀಗ ಬಿಜೆಪಿ ಲೋಕ ಸಮರದಲ್ಲಿ ಜಯ ಗಳಿಸಿದ ಬೆನ್ನಲ್ಲೇ ರಾಮ ಮಂದಿರ ನಿರ್ಮಿಸಲು ಒತ್ತಡ ಹೇರಲಾರಂಭಿಸಿದೆ.

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

2 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

2 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

2 hours ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

2 hours ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago