ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿದೆ. ಆದರೀಗ ಇದರ ಬೆನ್ನಲ್ಲೇ ಚುನಾವಣೆಗೂ ಮೊದಲು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳೂ ಸದ್ದು ಮಾಡಲಾರಂಭಿಸಿವೆ. ಅಲ್ಲದೇ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳನ್ನು ಶೀಘ್ರವಾಗಿ ಪೂರೈಸಿ ಎಂಬ ಒತ್ತಾಯ ಹೆಚ್ಚಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 542 ಕ್ಷೇತ್ರಗಳ ಪೈಕಿ 303ನ್ನು ಗೆದ್ದ ಬಳಿಕ ಮೊದಲ ಬಾರಿ ಮಾತನಾಡಿದ RSS ಮುಖ್ಯಸ್ಥ ಮೋಹನ್ ಭಾಗವತ್ ”’ರಾಮನ ಕೆಲಸ ನಾವೇ ವಹಿಸಿಕೊಂಡರೆ, ಅದನ್ನು ನಾವೇ ಮಾಡಿ ಮುಗಿಸುತ್ತೇವೆ. ಬೇರೆಯವರಿಗೆ ವಹಿಸಿದರೆ, ಆ ಕೆಲಸ ಮಾಡುವ ವ್ಯಕ್ತಿಯ ಮೇಲೆ ನಿಗಾ ಇರಿಸಬೇಕಾಗುತ್ತದೆ. ಬಹುದಿನಗಳಿಂದ ವಿಳಂಬಗೊಂಡ ಕೆಲಸವನ್ನು ಮಾಡಿ ಮುಗಿಸುವ ಕಡೆ ಮುತುವರ್ಜಿ ವಹಿಸಬೇಕಿದೆ,” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ನಾವು ಯಾವುದನ್ನು ಬಯಸುತ್ತೇವೋ ಅದನ್ನು ಪಡೆಯಲು ನಾವು ಕಾಯಬೇಕಾಗುತ್ತದೆ. ಅಲ್ಲದೇ ನ್ಮಮ ಗುರಿ ತಲುಪಲು ಸಹಾಯ ಮಾಡುವವರಿಗೆ ನಾವು ಸಹಾಯ ಮಾಡಬೇಕು ಎಂದಿದ್ದಾರೆ. RSS ಆರಂಭದಿಂದಲೂ ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಿಸಬೇಕೆಂಬ ಹಂಬಲ ಹೊಂದಿದೆ ಎಂಬುವುದು ಉಲ್ಲೇಖನೀಯ. ಇದೀಗ ಬಿಜೆಪಿ ಲೋಕ ಸಮರದಲ್ಲಿ ಜಯ ಗಳಿಸಿದ ಬೆನ್ನಲ್ಲೇ ರಾಮ ಮಂದಿರ ನಿರ್ಮಿಸಲು ಒತ್ತಡ ಹೇರಲಾರಂಭಿಸಿದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…