ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿದೆ. ಆದರೀಗ ಇದರ ಬೆನ್ನಲ್ಲೇ ಚುನಾವಣೆಗೂ ಮೊದಲು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳೂ ಸದ್ದು ಮಾಡಲಾರಂಭಿಸಿವೆ. ಅಲ್ಲದೇ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳನ್ನು ಶೀಘ್ರವಾಗಿ ಪೂರೈಸಿ ಎಂಬ ಒತ್ತಾಯ ಹೆಚ್ಚಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 542 ಕ್ಷೇತ್ರಗಳ ಪೈಕಿ 303ನ್ನು ಗೆದ್ದ ಬಳಿಕ ಮೊದಲ ಬಾರಿ ಮಾತನಾಡಿದ RSS ಮುಖ್ಯಸ್ಥ ಮೋಹನ್ ಭಾಗವತ್ ”’ರಾಮನ ಕೆಲಸ ನಾವೇ ವಹಿಸಿಕೊಂಡರೆ, ಅದನ್ನು ನಾವೇ ಮಾಡಿ ಮುಗಿಸುತ್ತೇವೆ. ಬೇರೆಯವರಿಗೆ ವಹಿಸಿದರೆ, ಆ ಕೆಲಸ ಮಾಡುವ ವ್ಯಕ್ತಿಯ ಮೇಲೆ ನಿಗಾ ಇರಿಸಬೇಕಾಗುತ್ತದೆ. ಬಹುದಿನಗಳಿಂದ ವಿಳಂಬಗೊಂಡ ಕೆಲಸವನ್ನು ಮಾಡಿ ಮುಗಿಸುವ ಕಡೆ ಮುತುವರ್ಜಿ ವಹಿಸಬೇಕಿದೆ,” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ನಾವು ಯಾವುದನ್ನು ಬಯಸುತ್ತೇವೋ ಅದನ್ನು ಪಡೆಯಲು ನಾವು ಕಾಯಬೇಕಾಗುತ್ತದೆ. ಅಲ್ಲದೇ ನ್ಮಮ ಗುರಿ ತಲುಪಲು ಸಹಾಯ ಮಾಡುವವರಿಗೆ ನಾವು ಸಹಾಯ ಮಾಡಬೇಕು ಎಂದಿದ್ದಾರೆ. RSS ಆರಂಭದಿಂದಲೂ ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಿಸಬೇಕೆಂಬ ಹಂಬಲ ಹೊಂದಿದೆ ಎಂಬುವುದು ಉಲ್ಲೇಖನೀಯ. ಇದೀಗ ಬಿಜೆಪಿ ಲೋಕ ಸಮರದಲ್ಲಿ ಜಯ ಗಳಿಸಿದ ಬೆನ್ನಲ್ಲೇ ರಾಮ ಮಂದಿರ ನಿರ್ಮಿಸಲು ಒತ್ತಡ ಹೇರಲಾರಂಭಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…