ರಾಮನ ಜನ್ಮಭೂಮಿಯಲ್ಲಿ ಇನ್ನೂ ನಾಲ್ಕು ತಿಂಗಳೊಳಗೆ ಆಗಸದೆತ್ತರದ ರಾಮ ಮಂದಿರ ನಿರ್ಮಾಣ : ಅಮಿತ್ ಶಾ -Vishwanews24

ಭೂಪಾಲ್ : ಇನ್ನೂ ನಾಲ್ಕು ತಿಂಗಳೊಳಗೆ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ.

ಮಧ್ಯಪ್ರದೇಶದ ಜಬಲ್ಪುರದಲ್ಲಿ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಪರವಾದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ ಮಾಡದಂತೆ ಕಾಂಗ್ರೆಸ್ ಪರ ವಕೀಲ ಹಾಗೂ ರಾಜಕಾರಣಿ ಕಪಿಲ್ ಸಿಬಲ್ ಹೇಳುತ್ತಾರೆ. ಆದರೆ, ರಾಮನ ಜನ್ಮಭೂಮಿಯಲ್ಲಿ ಇನ್ನೂ ನಾಲ್ಕು ತಿಂಗಳೊಳಗೆ ಆಗಸದೆತ್ತರದ ರಾಮ ಮಂದಿರ ನಿರ್ಮಾಣವಾಗಲಿದೆ ಎಂದರು.

ಜವಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕೆಲ ಯುವಕರು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ. ಆದರೆ, ಅವರನ್ನು ರಾಹುಲ್ ಗಾಂಧಿ ಹಾಗೂ ಕೇಜ್ರಿವಾಲ್ ರಕ್ಷಿಸಲು ಬಯಸುತ್ತಿದ್ದಾರೆ. ಏಕೆ ಅವರನ್ನು ರಕ್ಷಿಸಲು ಬಯಸುತ್ತಿದ್ದಾರೆ? ಅವರು ರಾಹುಲ್ ಹಾಗೂ ಕ್ರೇಜಿವಾಲ್ ಅವರ ಸಂಬಂಧಿಕರೇ? ಎಂದು ಪ್ರಶ್ನಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ರಾಹುಲ್ ಗಾಂಧಿ, ಕೇಜ್ರಿವಾಲ್ ಹಾಗೂ ಮಮತಾ ಬ್ಯಾನಕ್ಜಿ ಅಲ್ಪಸಂಖ್ಯಾತರನ್ನು ಹಾದಿ ತಪ್ಪಿಸುತ್ತಿದ್ದಾರೆ. ಪಾಕಿಸ್ತಾನ, ಅಪ್ಘಾನಿಸ್ತಾನ, ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದಿರುವ ಹಿಂದೂಗಳು, ಸಿಖ್ಖರು, ಬೌದ್ದರು, ಪಾರ್ಸಿಗಳು, ಜೈನರು ಹಾಗೂ ಕ್ರಿಶ್ಚಿಯನ್ನರಿಗೆ ಈ ಕಾಯ್ದೆಯಿಂದ ಪೌರತ್ವ ದೊರೆಯಲಿದೆ ಎಂದರು.

ಇದೇ ವೇಳೆ ಅಮಿತ್ ಶಾ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಲು ಮುಂದಾದ 50 ಯುವ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ವಿದ್ಯಾರ್ಥಿಗಳನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು ಎಂದು ಜಬಲ್ಫುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago