Featured

ರಾಮನ ಮಂದಿರ ನಿರ್ಮಾಣಕ್ಕೆ ಸುಮುಹೂರ್ತ ಕೂಡಿ ಬಂದಿರುವುದು ಮಹಾಭಾಗ್ಯ, ತಮಿಳು ನೆಲದಲ್ಲಿ ರಾಮಾಯಣದ ಹೆಜ್ಜೆಗುರುತು: ಪೇಜಾವರ ಶ್ರೀ -Vishwanews24

ರಾಮನ ಮಂದಿರ ನಿರ್ಮಾಣಕ್ಕೆ ಸುಮುಹೂರ್ತ ಕೂಡಿ ಬಂದಿರುವುದು ಮಹಾಭಾಗ್ಯ, ತಮಿಳು ನೆಲದಲ್ಲಿ ರಾಮಾಯಣದ ಹೆಜ್ಜೆಗುರುತು: ಪೇಜಾವರ ಶ್ರೀ -Vishwanews24

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸ್ಥಳವು ಮರಳು ಮಿಶ್ರಿತ ಜೌಗುಮಣ್ಣಿನದಾಗಿದ್ದು ಮಂದಿರಕ್ಕೆ ಭವಿಷ್ಯದಲ್ಲಿ ಯಾವುದೇ ಹಾನಿಯಾಗಬಾರದು ಎಂಬ ದೃಷ್ಟಿಯಿಂದ ಭೂಮಿಯ ಧಾರಣ ಸಾಮರ್ಥ್ಯ ಅಧ್ಯಯನ ನಡೆಯುತ್ತಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಚೆನ್ನೈನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಮಂದಿರ ನಿರ್ಮಾಣದ ಉಸ್ತುವಾರಿಯನ್ನು ಎಲ್‌ ಅಂಡ್ ಟಿ ಕಂಪೆನಿಗೆ ವಹಿಸಲಾಗಿದೆ. ಜ.15ರಿಂದ ಫೆ.27ರವರೆಗೆ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣಾ ಅಭಿಯಾನ ನಡೆಯಲಿದೆ. ₹ 1,400 ಕೋಟಿ ಅಂದಾಜು ವೆಚ್ಚದಲ್ಲಿ ಮಂದಿರ ನಿರ್ಮಾಣವಾಗಲಿದೆ ಎಂದರು.

ಧನ ಸಂಗ್ರಹ ಜವಾಬ್ದಾರಿಯನ್ನು ಆರ್‌ಎಸ್‌ಎಸ್ ಹಾಗೂ ವಿಶ್ವ ಹಿಂದೂ ಪರಿಷತ್‌ಗೆ ವಹಿಸಲಾಗಿದ್ದು, ಜಿಲ್ಲಾವಾರು ಸಮಿತಿ ರಚಿಸಿ ಸಮಾಜದ ಎಲ್ಲ ಸ್ತರದ ಜನರಿಂದ ದೇಣಿಗೆ ಪಡೆಯುವ ಉದ್ದೇಶವಿದೆ. ಧನ‌ಸಂಗ್ರಹ ಹಾಗೂ ವಿನಿಯೋಗದಲ್ಲಿ ಪಾರದರ್ಶಕತೆಗೆ ಒತ್ತು ನೀಡಲಾಗಿದೆ ಎಂದರು.

ದೇಶದ ಕೋಟ್ಯಂತರ ಹಿಂದೂಗಳ ಹೋರಾಟ, ಪ್ರಾಣಾರ್ಪಣೆ, ಸುದೀರ್ಘ ನ್ಯಾಯಾಂಗ ವ್ಯಾಜ್ಯದ ಬಳಿಕ ಅಯೋಧ್ಯೆಯಲ್ಲಿ ರಾಮನ ಮಂದಿರ ನಿರ್ಮಾಣಕ್ಕೆ ಸುಮುಹೂರ್ತ ಕೂಡಿ ಬಂದಿರುವುದು ಮಹಾಭಾಗ್ಯ. ರಾಮಮಂದಿರ ನಿರ್ಮಾಣ ಆಂದೋಲನದಲ್ಲಿ ವಿಶ್ವೇಶ ತೀರ್ಥ ಶ್ರೀಗಳು ಸಕ್ರಿಯವಾಗಿ ಪಾಲ್ಗೊಂಡು‌ ಮಾರ್ಗದರ್ಶನ ನೀಡಿದ್ದರು. ಅದರ ಫಲವಾಗಿ ಟ್ರಸ್ಟ್‌ನಲ್ಲಿ ವಿಶ್ವಸ್ಥರಾಗಿ ಕಾರ್ಯನಿರ್ವಹಿಸುವ ಅವಕಾಶ ಒಲಿದು ಬಂದಿದೆ ಎಂದರು.

ತಮಿಳು ನೆಲ, ಭಾಷೆ ಸಂಸ್ಕೃತಿಯಲ್ಲೂ ರಾಮಾಯಣದ ಸಂದೇಶ ಹಾಗೂ ಮೌಲ್ಯಗಳು ಸಮೃದ್ಧವಾಗಿವೆ. ಭರತನಾಟ್ಯದಂಥ ಶಿಷ್ಟ ಕಲೆ ಹಾಗೂ ಇಲ್ಲಿನ ಜನಪದೀಯ ಸಂಸ್ಕೃತಿಯಲ್ಲೂ ರಾಮಾಯಣದ ಹೆಗ್ಗುರುತುಗಳು ಕಾಣಿಸುತ್ತಿವೆ. ಧನುಷ್ಕೋಟಿ, ರಾಮಸೇತು, ರಾಮೇಶ್ವರದಂಥಹ ಪವಿತ್ರ ಸ್ಥಳಗಳು ತಮಿಳುನಾಡಿನಲ್ಲಿರುವುದು ರಾಮಾಯಣದೊಂದಿಗಿನ ನಂಟಿಗೆ ಸಾಕ್ಷಿ ಎಂದು ಪೇಜಾವರ ಶ್ರೀಗಳು ಹೇಳಿದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

9 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

15 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

17 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

17 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

17 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

18 hours ago