ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು ಮತಗಳನ್ನು ಕೇಳಿ ಪಡೆದವರು, ಅದೇ ಶ್ರೀರಾಮನಿಗೆ ಜನಸಾಮಾನ್ಯರು ನೀಡಿದ ದೇಣಿಗೆಯ ಒಂದೊಂದು ರೂಪಾಯಿಯ ಲೆಕ್ಕಕೊಡಲು ಬಿಜೆಪಿ ನಾಯಕರಿಗೆ ಧೈರ್ಯ ಇಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷೆ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಪ್ರಶ್ನಗಳಿಗೆ ಉತ್ತರ ಕೊಡದೆ ಇರುವುದು ಸಾರ್ವಜನಿಕ ಭಾಷಾ ಪಂಡಿತರ ಸಾಮಾನ್ಯ ಜ್ಞಾನದ ಪರಿಮಿತಿಗೆ ಬರುವುದಿಲ್ಲವೇ?” ರಾಮನ ಹೆಸರನ್ನು ರಾಜಕೀಯಕ್ಕೆ ಬಳಸಬಹುದು; ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಅಯೋಧ್ಯೆ ಶ್ರೀರಾಮನ ಹೆಸರಿನಲ್ಲಿ ನಿರ್ಮಾಣವಾದ ದೇವಸ್ಥಾನದ ಕಾಮಗಾರಿ ವೆಚ್ಚ ಹಾಗೂ ನಿರ್ವಹಣೆಯಲ್ಲಿ ನಡೆದಿರುವ ಕೋಟ್ಯಂತರ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಎದ್ದಿರುವ ಪ್ರಶ್ನೆಗಳಿಗೆ ಉತ್ತರ ನೀಡಲು ಬಿಜೆಪಿ ನಾಯಕರಿಗೆ ಯೋಗ್ಯತೆ ಇದೆಯೇ? “ನಾ ಖಾವೂಂಗಾ, ನಾ ಖಾನೇ ದೂಂಗಾ” ಎಂದು ಬೊಬ್ಬೆ ಹೊಡೆದಿದ್ದವರು ಈಗ ಬಾಯ್ತೆರೆದು ಮಾತಾಡುವುದು ಬಿಡಿ, ಮುಖ ಕೂಡ ತೋರಿಸುತ್ತಿಲ್ಲ ಯಾಕೆ? ಬಾಯಿ ಬಿಟ್ಟರೆ ಮುಖವಾಡ ಕಳಚುವ ಭಯವೇ? ಎಂದು ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…