Featured

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು

ಶ್ರೀರಾಮ ಕಾಲ್ಪನಿಕ ಎಂದು ಕೋರ್ಟ್‌ಗೆ ಅಫಿದಾವಿತ್ ಸಲ್ಲಿಸಿದ ಕಾಂಗ್ರೆಸ್‌ನಿಂದ ಪ್ರತಿಭಟನೆಯು ರಾಜಕೀಯ ದ್ವಂದ್ವ ನೀತಿಯ ಸ್ಪಷ್ಟ ಉದಾಹರಣೆಯಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ವರ್ಷಗಳ ಕಾಲ ಅಡ್ಡಿಪಡಿಸಿದವರು, ಶ್ರೀರಾಮನ ಅಸ್ತಿತ್ವವ ಪ್ರಶ್ನಿಸಿದವರು, ರಾಮಭಕ್ತರ ಭಾವನೆಗಳನ್ನು ನಿರಂತರವಾಗಿ ಅವಮಾನಿಸಿದವರು ಇಂದು ಕಾಪುವಿನಲ್ಲಿ ಅಯೊ ಶ್ರೀ ರಾಮನ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಜನರ ಕಣ್ಣಿಗೆ ಮಣ್ಣೆರೆಚುವ ಪ್ರಯತ್ನವಾಗಿದೆ. ಇದು ಕಾಂಗ್ರೆಸ್‌ನ ರಾಜಕೀಯ ನಾಟಕವಲ್ಲದೆ ಮತ್ತೇನೂ ಅಲ್ಲ ಎಂದು ಅವರು ಹೇಳಿದ್ದಾರೆ.

ಶ್ರೀರಾಮ ಕೋಟ್ಯಾಂತರ ಭಾರತೀಯರ ಆರಾಧ್ಯ ದೈವ. ಜನರು ಕಾಂಗ್ರೆಸ್‌ನವರ ಮಾತುಗಳನ್ನು ನಂಬುವವರಲ್ಲ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಬಗ್ಗೆ ಕಾಂಗ್ರೆಸ್‌ನ ಇತಿಹಾಸವನ್ನು ಕಾಪುವಿನ ನೆನಪಿಟ್ಟುಕೊಂಡಿದ್ದಾರೆ. ಕಾಂಗ್ರೆಸ್ ಮೊದಲು ತನ್ನ ನಾಯಕರು ರಾಮ ಮಂದಿರದ ಬಗ್ಗೆ ನೀಡಿರುವ ಹೇಳಿಕೆಗೆ ಉತ್ತರ ನೀಡಲಿ ಎಂದು ಆಗ್ರಹಿಸಿದರು.

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ನಿರ್ಮಾಣವಾಗಿರುವುದು ದೇಶದ ಕೋಟ್ಯಾಂತರ ಹಿಂದೂ ಗಳ ಶತಮಾನಗಳ ಕನಸು ನನಸಾದ ಕ್ಷಣ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾಗವಹಿಸದ ಕಾಂಗ್ರೆಸ್ ನಾಯ ರು ಈಗ ರಾಮ ಭಕ್ತಿಯ ಮುಖವಾಡ ಧರಿಸಿರುವುದು ಹಾಸ್ಯಾಸ್ಪದವಾಗಿದೆ.
ಕಾಪುವಿನಲ್ಲಿ ನಡೆಸಿರುವ ಪ್ರತಿಭಟನೆ ಕಾಂಗ್ರೆಸ್‌ ದ್ವಿಮುಖ ರಾಜಕೀಯಕ್ಕೆ ಮತ್ತೊಂದು ಸಾಕ್ಷಿ. ಜನರು ಕಾಂಗ್ರೆ ನ ಈ ನಾಟಕವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ರಾಮನ ಬಗ್ಗೆ ಕಾಂಗ್ರೆಸ್‌ಗೆ ಏಕಾಏಕಿ ಮೂಡಿರುವ ಪ್ರೀತಿಗೆ ಅಯೋಧ್ಯೆಯಲ್ಲಿರುವ ಶ್ರೀ ರಾಮನ ಪವಾಡವೇ ಕಾರಣ.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಾಪುವಿನಲ್ಲೂ ಅಲ್ಲದೇ ರಾಜ್ಯ ಹಾಗೂ ದೇಶದ ಜನರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಜಿತೇಂದ್ರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

2 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

9 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

18 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

1 hour ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago