Featured

ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ಹೆಸರಿನಲ್ಲಿ ವಂಚನೆ – ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ – vishwanews24

ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ಹೆಸರಿನಲ್ಲಿ ವಂಚನೆ – ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ

ನವದೆಹಲಿ: ಅಯೋಧ್ಯೆಯಲ್ಲಿ  ರಾಮಮಂದಿರ  ಉದ್ಘಾಟನೆ ಕಾರ್ಯಕ್ರಮ ಸಮೀಪಿಸುತ್ತಿದ್ದಂತೆ ದೇವಾಲಯದ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡುವ ಆಘಾತಕಾರಿ ದಂಧೆ ಬೆಳಕಿಗೆ ಬಂದಿದೆ.

ಸೈಬರ್ ಕ್ರಿಮಿನಲ್‌ಗಳು ದೇವಸ್ಥಾನದ ಹೆಸರಿನಲ್ಲಿ ದೇಣಿಗೆ ಪಡೆಯಲು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಾಕಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಎಚ್ಚರಿಸಿದೆ. QR ಕೋಡ್ ಅನ್ನು ಸ್ಕ್ಯಾನ್ ಮಾಡಿ, ರಾಮಮಂದಿರ ದೇವಾಲಯಕ್ಕಾಗಿ ದೇಣಿಗೆ ನೀಡುವಂತೆ ಸಂದೇಶ ಕಳುಹಿಸಲಾಗಿದೆ.

ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಮಾತನಾಡಿ, ಈ ವಿಷಯವನ್ನು ದೆಹಲಿ ಮತ್ತು ಉತ್ತರ ಪ್ರದೇಶದ ಗೃಹ ಸಚಿವಾಲಯ ಮತ್ತು ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಮಂದಿರದ ನಿರ್ಮಾಣದ ಉಸ್ತುವಾರಿ ವಹಿಸಿರುವ ಟ್ರಸ್ಟ್ ಹಣವನ್ನು ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನ್ಯಾಸ್ ನಿಧಿ ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ. ನಾನು ಗೃಹ ಸಚಿವಾಲಯ, ಉತ್ತರ ಪ್ರದೇಶ ಡಿಜಿಪಿ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಜನರು ಇಂತಹ ವಂಚನೆಗಳಿಗೆ ಬಲಿಯಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ದೇವಸ್ಥಾನಕ್ಕೆ ದೇಣಿಗೆ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಮತ್ತು ದೂರವಾಣಿ ಕರೆಗಳು ಬಂದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಕರೆ ಸ್ವೀಕರಿಸಿದ ವ್ಯಕ್ತಿಗಳಲ್ಲಿ ಒಬ್ಬರು, VHP ಕಾರ್ಯಕರ್ತರೊಂದಿಗೆ ಸಂಖ್ಯೆಯನ್ನು ಹಂಚಿಕೊಂಡಿದ್ದಾರೆ.

ದೇಣಿಗೆ ನೀಡುವವರಂತೆ ವಂಚಕರಿಗೆ ಕರೆ ಮಾಡಿ ಅದರ ಆಡಿಯೋ ರೆಕಾರ್ಡ್‌ನ್ನು ವಿಹೆಚ್‌ಪಿ ಕಾರ್ಯಕರ್ತರೊಬ್ಬರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ವಂಚಕ, ದಾನಿಗಳ ಹೆಸರುಗಳು ಮತ್ತು ಸಂಪರ್ಕ ವಿವರಗಳನ್ನು ನಮೂದಿಸಲಾಗುತ್ತಿದೆ. ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಅವರನ್ನು ರಾಮ ಮಂದಿರಕ್ಕೆ ಆಹ್ವಾನಿಸಲಾಗುವುದು ಎಂದು ಹೇಳಿದ್ದಾನೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago