Featured

ರಾಮಮಂದಿರ ಅಯೋಧ್ಯಾ ಪ್ರಸಾದ್ ಹೆಸರಿನಲ್ಲಿ ಸಿಹಿತಿಂಡಿ ಮಾರಾಟ  : ಅಮೆಜಾನ್‌ಗೆ ನೋಟಿಸ್ – vishwanews24

ರಾಮಮಂದಿರ ಅಯೋಧ್ಯಾ ಪ್ರಸಾದ್ ಹೆಸರಿನಲ್ಲಿ ಸಿಹಿತಿಂಡಿ ಮಾರಾಟ  : ಅಮೆಜಾನ್‌ಗೆ ನೋಟಿಸ್

ನವದೆಹಲಿ : ರಾಮಮಂದಿರ ಅಯೋಧ್ಯಾ ಪ್ರಸಾದ್’ ಹೆಸರಿನಲ್ಲಿ ಸಿಹಿತಿಂಡಿಗಳನ್ನು www.amazon.in ನಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ಅಮೆಜಾನ್ ಗೆ ಮುಖ್ಯ ಆಯುಕ್ತ ರೋಹಿತ್ ಕುಮಾರ್ ಸಿಂಗ್ ನೇತೃತ್ವದ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ.

ಗ್ರಾಹಕರ ವ್ಯವಹಾರಗಳ ಇಲಾಖೆ ನೀಡಿರುವ ಅಧಿಕೃತ ಹೇಳಿಕೆಯ ಪ್ರಕಾರ ಅಮೆಜಾನ್, ಶ್ರೀರಾಮ ಮಂದಿರ ಅಯೋಧ್ಯೆ ಪ್ರಸಾದದ ಹೆಸರಿನಲ್ಲಿ ಸಿಹಿತಿಂಡಿಗಳ ಮಾರಾಟ ಮಾಡುವ ಮೂಲಕ ಮೋಸದ ವ್ಯಾಪಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ನೀಡಿದ ದೂರಿನ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.

ಇದರಲ್ಲಿ ರಘುಪತಿ ಘೀ ಲಾಡೂ, ಖೋಯಾ ಖೋಬಿ ಲಾಡೂ,ಘೀ ಬಂಡಿ ಲಾಡೂ, ದೇಸಿ ಹಸುವಿನ ಹಾಲಿನ ಪೇಡಾ ಸೇರಿದಂತೆ ಹಲವು ಸಿಹಿ ತಿಂಡಿಗಳನ್ನು ಹೈಲೈಟ್ ಮಾಡಲಾಗಿದೆ.”ಶ್ರೀ ರಾಮಮಂದಿರ ಅಯೋಧ್ಯಾ ಪ್ರಸಾದ್” ಎಂದು ಹೇಳಿಕೊಳ್ಳುವ ವಿವಿಧ ಸಿಹಿತಿಂಡಿಗಳು/ಆಹಾರ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿರುವುದನ್ನು ಗಮನಿಸಲಾಗಿದೆ.

ಗ್ರಾಹಕರ ರಕ್ಷಣೆ(ಇ-ಕಾಮರ್ಸ್) ನಿಯಮಗಳು, 2020 ರ ಅಡಿಯಲ್ಲಿ, ಆಹಾರ ಉತ್ಪನ್ನಗಳ ಮಾರಾಟವನ್ನು ಆನ್‌ಲೈನ್‌ನಲ್ಲಿ ಸಕ್ರಿಯಗೊಳಿಸುವುದರಿಂದ ಉತ್ಪನ್ನದ ನಿಜವಾದ ಗುಣಲಕ್ಷಣಗಳ ಬಗ್ಗೆ ಗ್ರಾಹಕರ ದಾರಿ ತಪ್ಪಿಸುತ್ತದೆ ಎಂಬುದು ಗಮನಾರ್ಹವಾಗಿದೆ.

ಹೀಗಾಗಿ CCPA ಅಮೆಜಾನ್ ಗೆ ನೋಟಿಸ್ ಜಾರಿ ಮಾಡಿದೆ.ಏಳು ದಿನಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೋರಿದೆ ಎಂದು ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ. ಒಂದು ವೇಳೆ ನೋಟಿಸ್ ಗೆ ಉತ್ತರ ನೀಡಲು ವಿಫಲವಾದರೆ ಗ್ರಾಹಕ ಸಂರಕ್ಷಣಾ ಕಾಯ್ದೆ, 2019 ರ ನಿಬಂಧನೆಗಳ ಅಡಿಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago