ಉಡುಪಿ: ಆ. 5ರ ಬುಧವಾರದಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದ್ದು, ಅಂದು ಉಡುಪಿಯ ಪೇಜಾವರ ಮಠದಲ್ಲೂ ಸಂಭ್ರಮಾಚರಣೆ ಹಾಗೂ ವಿಶ್ವೇಶತೀರ್ಥ ಶ್ರೀಪಾದರಿಗೆ ಭಕ್ತಿ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಮಠದ ವಾಸುದೇವ ಭಟ್ ತಿಳಿಸಿದ್ದಾರೆ.
ರಾಮಮಂದಿರ ನಿರ್ಮಾಣ ಆಂದೋಲನದಲ್ಲಿ ವಿಶ್ವೇಶತೀರ್ಥ ಶ್ರೀಪಾದರ ಕೊಡುಗೆ ಅಪಾರವಾಗಿದೆ. ಅವರು ನೀಡಿರುವ ಮಾರ್ಗದರ್ಶನ, ಸ್ಫೂರ್ತಿ, ನೇತೃತ್ವ ಎಲ್ಲವನ್ನೂ ಸ್ಮರಿಸಿಕೊಂಡು ಅವರ ಭಾವಚಿತ್ರ ಹಾಗೂ ಪೀಠಕ್ಕೆ ವಿಶೇಷ ಅಲಂಕಾರ ಮಾಡಿ ಬೆಳಿಗ್ಗೆ 11.45ರ ವೇಳೆಗೆ ಮಂಗಳಾರತಿ ಬೆಳಗಿಸಲಾಗುವುದು. ಬಳಿಕ ಮಠದ ಮುಂಭಾಗದ ರಥಬೀದಿಯಲ್ಲಿ ಸಂಭ್ರಮಾಚರಣೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…