ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಅಭಿಜಿತ್ ಮುಹೂರ್ತ, ಮೃಗಶಿರ ನಕ್ಷತ್ರ, ಆನಂದ ಯೋಗದಲ್ಲಿ ಗರ್ಭಗುಡಿಗೆ ಶಿಲಾನ್ಯಾಸ ನೆರವೇರಿಸಿದರು.
ಶಿಲಾನ್ಯಾಸದ ಬಳಿಕ ಮಾತನಾಡಿದ ಯುಪಿ ಸಿಎಂ, ರಾಮಮಂದಿರ ಭಾರತದ ರಾಷ್ಟ್ರೀಯ ದೇವಾಲಯವಾಗಲಿದೆ. ಜನರು ಈ ದಿನಕ್ಕಾಗಿ ಬಹಳ ಸಮಯದಿಂದ ಕಾಯುತ್ತಿದ್ದರು. ಈ ರಾಮಮಂದಿರ ಭಾರತದ ಏಕತೆಯ ಸಂಕೇತವಾಗಲಿದೆ ಎಂದು ತಿಳಿಸಿದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ 2 ವರ್ಷಗಳ ಹಿಂದೆ ಪ್ರಾರಂಭಿಸಿದರು. ನಿರ್ಮಾಣಕಾರ್ಯ ಯಶಸ್ವಿಯಾಗಿ ಮುಂದುವರಿಯುತ್ತಿದ್ದು, ಇಂದು ಗರ್ಭಗುಡಿಯಲ್ಲಿ ಶಿಲಾರಾಧನೆ ನಡೆಸುತ್ತಿರುವುದು ನಮ್ಮ ಅದೃಷ್ಟ ಎಂದು ಯೋಗಿ ನುಡಿದರು.
ಗರ್ಭಗುಡಿ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ರಾಮಮಾರ್ಚ, ದುರ್ಗಾ ಸಪ್ತಶತಿ, ರುದ್ರಾಭಿಷೇಕ, ರಾಮರಕ್ಷಾ ಸ್ತೋತ್ರ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸ, ಸುಂದರಕಾಂಡ ಪಾರಾಯಣ ನಡೆಯಿತು.
ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್ ಅವರು ಗರ್ಭಗುಡಿಗಾಗಿ ಕೆತ್ತಿದ ಮೊದಲ ಶಿಲೆಯನ್ನು ಇಟ್ಟು, ನಿರ್ಮಾಣ ಕಾರ್ಯಕ್ಕೆ ಅನುವು ಮಾಡಿಕೊಟ್ಟರು. ರಾಮಮಂದಿರದ ಗರ್ಭಗುಡಿ 2023ರ ಡಿಸೆಂಬರ್ ಒಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ದೇವಾಲಯದ ಉಸ್ತುವಾರಿ ವಹಿಸಿರುವ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…