ರಾಮನಗರ : ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಕೆಲಸ ಆಗುತ್ತಿದೆ. ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ ಮಾಡಬೇಡಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ ಪೀಠೋಪಕರಣ ಧ್ವಂಸ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ ಗುರುವಾರ ರಾಮನಗರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.
ಯಾರಿಗೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರವಿಲ್ಲ. ರಾಮಸೇನೆ ಹೆಸರಲ್ಲಿ ಇಂತಹ ದಾಂಧಲೆ ಮಾಡುವುದು ಸರಿಯಲ್ಲ. ಏನಾದರೂ ಅಕ್ರಮ ನಡೆಯುತ್ತಿದ್ದರೆ ಪೊಲೀಸರ ಗಮನಕ್ಕೆ ತಂದು ದೂರು ನೀಡಬೇಕು. ಇವರೇ ನುಗ್ಗಿ ದಾಂಧಲೆ ಮಾಡಿ ಗೂಂಡಾಗಿರಿ ಮಾಡುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕಾನೂನು ಸುವ್ಯವಸ್ಥೆಯನ್ನು ಎಲ್ಲರೂ ಪಾಲಿಸಬೇಕು. ಇಂತವರ ಮೇಲೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ದೇವರ ಹೆಸರು ಇಟ್ಟುಕೊಂಡು ಇಂತಹ ಕೃತ್ಯ ಮಾಡೋದು ರಾಮನಿಗೆ ಅಗೌರವ. ಹಿಂದೂ ಸಂಘಟನೆಗಳು ಕೂಡ ಇದನ್ನು ಖಂಡಿಸಬೇಕು. ಅನೈತಿಕ ಪೊಲೀಸ್ ಗಿರಿ ಮಾಡಿ ಕಾನೂನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಕ್ರಮವಹಿಸುತ್ತೇವೆ. ಈ ರೀತಿ ಮಾಡಿಕೊಂಡು ಹೋದರೆ ಮುಂದೆ ಮಂಗಳೂರಿನ ಅಭಿವೃದ್ಧಿಗೆ ಹಿನ್ನೆಡೆಯಾಗಲಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಕಾಂಗ್ರೆಸ್ ಸರಕಾರ ಬಂದ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಆಗುತ್ತಿದೆ. ಕೆಲವು ಸಂಘಟನೆಗಳು ಗಲಾಟೆ ಮಾಡಿ ಗೊಂದಲ ಸೃಷ್ಠಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…