Featured

ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ , ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ : ದಿನೇಶ್ ಗುಂಡೂರಾವ್ – vishwanews24

ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ , ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ : ದಿನೇಶ್ ಗುಂಡೂರಾವ್

ರಾಮನಗರ : ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಕೆಲಸ ಆಗುತ್ತಿದೆ. ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ ಮಾಡಬೇಡಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ಕಾರ್ಯಕರ್ತರು ದಾಳಿ ಮಾಡಿ ಪೀಠೋಪಕರಣ ಧ್ವಂಸ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ ಗುರುವಾರ ರಾಮನಗರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಯಾರಿಗೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರವಿಲ್ಲ. ರಾಮಸೇನೆ ಹೆಸರಲ್ಲಿ ಇಂತಹ ದಾಂಧಲೆ ಮಾಡುವುದು ಸರಿಯಲ್ಲ. ಏನಾದರೂ ಅಕ್ರಮ ನಡೆಯುತ್ತಿದ್ದರೆ ಪೊಲೀಸರ ಗಮನಕ್ಕೆ ತಂದು ದೂರು ನೀಡಬೇಕು. ಇವರೇ ನುಗ್ಗಿ ದಾಂಧಲೆ ಮಾಡಿ ಗೂಂಡಾಗಿರಿ ಮಾಡುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾನೂನು ಸುವ್ಯವಸ್ಥೆಯನ್ನು ಎಲ್ಲರೂ ಪಾಲಿಸಬೇಕು. ಇಂತವರ ಮೇಲೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ದೇವರ ಹೆಸರು ಇಟ್ಟುಕೊಂಡು ಇಂತಹ ಕೃತ್ಯ ಮಾಡೋದು ರಾಮನಿಗೆ ಅಗೌರವ. ಹಿಂದೂ ಸಂಘಟನೆಗಳು ಕೂಡ ಇದನ್ನು ಖಂಡಿಸಬೇಕು. ಅನೈತಿಕ ಪೊಲೀಸ್ ಗಿರಿ ಮಾಡಿ ಕಾನೂನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಕ್ರಮವಹಿಸುತ್ತೇವೆ. ಈ ರೀತಿ ಮಾಡಿಕೊಂಡು ಹೋದರೆ ಮುಂದೆ ಮಂಗಳೂರಿನ ಅಭಿವೃದ್ಧಿಗೆ ಹಿನ್ನೆಡೆಯಾಗಲಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಕಾಂಗ್ರೆಸ್ ಸರಕಾರ ಬಂದ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಆಗುತ್ತಿದೆ. ಕೆಲವು ಸಂಘಟನೆಗಳು ಗಲಾಟೆ ಮಾಡಿ ಗೊಂದಲ ಸೃಷ್ಠಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

6 hours ago