ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ನ ಶಂಕಿತ ಉಗ್ರನ ಸುಳಿವು ಕೊಟ್ಟರೆ 10 ಲಕ್ಷ ನಗದು ಬಹುಮಾನ ಕೊಡುವುದಾಗಿ ಬಾಂಬರ್ನ ಸಿಸಿಟಿವಿ ಫೋಟೋವೊಂದನ್ನು ಬುಧವಾರ ಎನ್ಐಎ ಬಿಡುಗಡೆ ಮಾಡಿತ್ತು. ಈ ಬೆನ್ನಲ್ಲೇ ಸಿಸಿಬಿ (CCB) ಪೊಲೀಸರು ಬಾಂಬರ್ನ ಮತ್ತೊಂದು ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.
ಸಿಸಿಟಿವಿಯಲ್ಲಿ ಬಾಂಬರ್ ದೃಶ್ಯ ಸಮರ್ಪಕವಾಗಿ ಸೆರೆಯಾಗದ ಕಾರಣ ರೇಖಾಚಿತ್ರ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದರು. ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯವನ್ನು ಆಧಾರವಾಗಿ ಇಟ್ಟುಕೊಂಡು ಸಿಸಿಬಿ ಶಂಕಿತ ಉಗ್ರನ ರೇಖಾಚಿತ್ರ ತಯಾರಿ ಮಾಡಿದೆ. ಈಗಾಗಲೇ ಸಾರ್ವಜನಿಕರಿಂದ ಸಾಕಷ್ಟು ಕರೆಗಳು ಬಂದಿವೆ. ಆರೋಪಿಯನ್ನು ನೋಡಿದ್ದಾಗಿ ಕರೆಗಳು ಬರುತ್ತಿದ್ದ ಕಾರಣ ರೇಖಾಚಿತ್ರ ಬಿಡುಗಡೆ ಮಾಡಲು ಸಿಸಿಬಿ ತಯಾರಿ ನಡೆಸಿತ್ತು.
ಖ್ಯಾತ ಸ್ಕೆಚ್ ಆರ್ಟಿಸ್ಟ್ನಿಂದ ಬಾಂಬರ್ನ ಇಮ್ಯಾಜಿನರಿ ಸ್ಕೆಚ್ ಬಿಡಿಸಲಾಗಿದೆ. ಸ್ಕೆಚ್ ಆರ್ಟಿಸ್ಟ್ ಎನ್ಐಎ ಬಿಡುಗಡೆ ಮಾಡಿದ ಸಿಸಿಟಿವಿ ಫೋಟೋವನ್ನು ಆಧರಿಸಿ ಸಂಪೂರ್ಣ ಮುಖದ ಇಮ್ಯಾಜಿನರಿ ಸ್ಕೆಚ್ ಮಾಡಿದ್ದಾರೆ. ಆರ್ಟಿಸ್ಟ್ ಹರ್ಷ ಅವರು ಈ ರೇಖಾಚಿತ್ರವನ್ನು ಬಿಡಿಸಿದ್ದಾರೆ. ಮಾಸ್ಕ್ ಧರಿಸಿದ ರೀತಿಯಲ್ಲಿ ಹಾಗೂ ಮಾಸ್ಕ್ ಇಲ್ಲದೇ ಟೋಪಿ ಕನ್ನಡಕ ಧರಿಸಿದ ರೇಖಾಚಿತ್ರವನ್ನು ಬಿಡಿಸಲಾಗಿದೆ. ಇದೇ ರೀತಿ ಬಾಂಬರ್ ಇರಬಹುದು ಎಂದು ಕಲ್ಪಿಸಿ ಕಲಾವಿದ ಹರ್ಷ ಈ ರೇಖಾಚಿತ್ರ ಬಿಡಿಸಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…