ಬೆಂಗಳೂರು: ರಾಜಧಾನಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತರ ಉಗ್ರರನ್ನು ಎನ್ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.
ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್ ಮತೀನ್ ತಾಹ, ಮುಸಾವಿರ್ ಹುಸೇನ್ನನ್ನು ಎನ್ಐಎ ಪೊಲೀಸರು ಕರೆತಂದರು. ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.
ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೆ ನಡೆಸಲಾಗುವುದು. ರಾಮೇಶ್ವರಂ ಬಾಂಬ್ ಸ್ಫೋಟ ಕೇಸಲ್ಲಿ ಯಾರ್ಯಾರ ಪಾತ್ರ ಏನಿತ್ತು? ಈ ಕೃತ್ಯದ ಹಿಂದೆ ಬೇರೆ ಯಾರೆಲ್ಲಾ ಇದ್ದಾರೆ? ರಾಮೇಶ್ವರಂ ಕೆಫೆಯಲ್ಲೇ ಬಾಂಬ್ ಬ್ಲಾಸ್ಟ್ ಮಾಡಿದ ಉದ್ದೇಶವೇನು? ಬೇರೆ ಎಲ್ಲೆಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲಾನ್ ಮಾಡಲಾಗಿತ್ತು ಎಂಬ ಅಂಶಗಳು ಸೇರಿದಂತೆ ನಾನಾ ದೃಷ್ಟಿಕೋನದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
ಭದ್ರತಾ ದೃಷ್ಟಿಯಿಂದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಿರುವ ಅಧಿಕಾರಿಗಳು, 14 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲು ತಯಾರಿ ನಡೆಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…