ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನ್ನ ತನಿಖೆಯನ್ನು ಇನ್ನಷ್ಟು ಚುರುಕು ಮಾಡಿದೆ. ಬುಧವಾರ ಬಾಂಬರ್ನ ಫೋಟೋವನ್ನು ಹಂಚಿಕೊಂಡಿರುವ ಎನ್ಐಎ, ಬಾಂಬರ್ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ.
ಅದಲ್ಲದೆ, ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ.ಬ್ರೂಕ್ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಳಸಿ ಬಾಂಬ್ ಸ್ಫೋಟ ನಡೆಸಿದ ಶಂಕಿತನ ವಿಡಿಯೋಗಳು ಈಗಾಗಲೇ ವೈರಲ್ ಆಗಿದೆ. ಈ ವ್ಯಕ್ತಿಯ ಮಾಹಿತಿ ನೀಡಿ, ಆತನ ಬಂಧನಕ್ಕೆ ಕಾರಣವಾದಲ್ಲಿ ಅವರಿಗೆ 10 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಶಂಕಿತ ಉಗ್ರನ ಮಾಹಿತಿಯನ್ನು 08029510900, 8904241100 ತಿಳಿಸುವಂತೆ ಎನ್ಐಎ ತಿಳಿಸಿದ್ದು, ಮಾಹಿತಿ ನೀಡಿದ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ನಗರದ ವೈಟ್ಫೀಲ್ಡ್ ಸನಿಹದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆ ಚುರುಕುಗೊಳಿಸಿದ್ದು, ಕೆಲವು ಶಂಕಿತರ ಮಾಹಿತಿ ಮೇರೆಗೆ ಬೆಂಗಳೂರು ಮಾತ್ರವಲ್ಲ, ಹೊರ ರಾಜ್ಯಗಳಲ್ಲಿ ಸಹ ಕಾರ್ಯಾಚರಣೆ ನಡೆಸಿದೆ. ಇನ್ನು ಎನ್ಐಎ ತಂಡ ಈಗಾಗಲೇ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಅಪರಾಧ ಸ್ಥಳದ ಪರಿಶೀಲನೆ ನಡೆಸಿದೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…