ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಈಗ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಬುಧವಾರ ಹೇಳಿದ್ದಾರೆ.
ಕಳೆದ ಎರಡು ದಿನಗಳಲ್ಲಿ ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಅವು ಪ್ರಕರಣ ಭೇದಿಸುವ ಭರವಸೆ ಮೂಡಿಸಿವೆ ಎಂದು ಪರಮೇಶ್ವರ್ ಅವರು ಇಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಮ್ಮ ಅಧಿಕಾರಿಗಳು ಶೀಘ್ರದಲ್ಲೇ ಪ್ರಕರಣ ಭೇದಿಸುತ್ತಾರೆ. ನಿನ್ನೆ ಮತ್ತು ಹಿಂದಿನ ದಿನ ಕೆಲವು ಪ್ರಮುಖ ಮಾಹಿತಿಗಳನ್ನು ಸ್ವೀಕರಿಸಲಾಗಿದೆ. ಅದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಇದೇ ರೀತಿ ಮುಂದುವರಿದರೆ ತನಿಖೆ ಪೂರ್ಣಗೊಳಿಸುತ್ತೇವೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ. ಅನುಮಾನದ ಆಧಾರದ ಮೇಲೆ, ಕೆಲವು ಜನರನ್ನು ಪೊಲೀಸರು ವಶಕ್ಕೆ ಪಡೆದು ಅವರಿಂದ “ಮಾಹಿತಿ” ಸಂಗ್ರಹಿಸಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕಿತ್ತು. ಆದರೆ ಅವರು ಇನ್ನೂ ಬಂದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…