Featured

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ: ಹುಬ್ಬಳಿಯ ಇಬ್ಬರು ಎನ್‌ಐಎ ವಶಕ್ಕೆ -vishwanews24

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ: ಹುಬ್ಬಳಿಯ ಇಬ್ಬರು  ಎನ್‌ಐಎ ವಶಕ್ಕೆ

ಹುಬ್ಬಳ್ಳಿ,: ದಿ ರಾಮೇಶ್ವರ ಕೆಫೆ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ನಿನ್ನೆ ಬೆಂಗಳೂರು ಸೇರಿದಂತೆ 11 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಎನ್‌ಐಎ ಅಧಿಕಾರಿಗಳು ಹುಬ್ಬಳ್ಳಿಯ ಸಹೋದರಿಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ, ಸಾಫ್ಟ್ವೇರ್ ಇಂಜಿನಿಯರ್ ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ನನ್ನು ಈ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಇವರಿಬ್ಬರೂ ವಿದೇಶಿ ಹ್ಯಾಂಡ್ಲರ್ ಗಳ ಸೂಚನೆಯಂತೆ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್‌ಗೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಎನ್‌ಐಎ ಅಧಿಕಾರಿಗಳಿಗೆ ಲಭ್ಯವಾದ ಹಿನ್ನಲೆ ಸಹೋದರರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಸಹೋದರರಿಬ್ಬರು ಹಣ ಸಹಾಯ ಮಾಡಿದ್ದ ಬಗ್ಗೆ ಕೆಲ ಡಿಜಿಟಲ್ ಸಾಕ್ಷ್ಯಗಳು ಎನ್‌ಐಎ ಅಧಿಕಾರಿಗಳಿಗೆ ದೊರೆತಿದೆ. ಹಣ ಸಹಾಯದ ಬಗ್ಗೆ ಸಹೋದರರು ವಿದೇಶಿ ಹ್ಯಾಂಡ್ಲರ್‌ನ ಜೊತೆ ಕೋಡ್ ವರ್ಡ್ನಲ್ಲಿ ಚಾಟಿಂಗ್ ಮಾಡಿದ್ದಾರೆ. ಇನ್ನು ರಾಮೇಶ್ವರಂ ಕೆಫೆ ಸ್ಫೋಟ ಬಳಿಕ ಆರೋಪಿ ಮುಸಾವೀರ್ ಹುಬ್ಬಳ್ಳಿಗೆ ಭೇಟಿ ನೀಡಿ, ಇಲ್ಲಿ ಹಣ ಪಡೆದು ಪಶ್ಚಿಮ ಬಂಗಾಳಕ್ಕೆ ತೆರಳಿರುವ ಅನುಮಾನ ಅಧಿಕಾರಿಗಳಿಗೆ ಮೂಡಿದೆ. ಹೀಗಾಗಿ ಇವರಿಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

19 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

20 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

20 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

20 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago