Featured

ರಾಮೋಜಿ ಫಿಲ್ಮ್ ಸಿಟಿ  ಸಂಸ್ಥಾಪಕ ರಾಮೋಜಿ ರಾವ್ ವಿಧಿವಶ – vishwanews24

ರಾಮೋಜಿ ಫಿಲ್ಮ್ ಸಿಟಿ  ಸಂಸ್ಥಾಪಕ ರಾಮೋಜಿ ರಾವ್ ವಿಧಿವಶ

ಹೈದರಾಬಾದ್: ಈನಾಡು ಮತ್ತು ರಾಮೋಜಿ ಫಿಲ್ಮ್ ಸಿಟಿ  ಸಂಸ್ಥಾಪಕ ರಾಮೋಜಿ ರಾವ್ (87) ವಿಧಿವಶರಾಗದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮೋಜಿ ರಾವ್  ಅವರು ಜೂನ್ 5 ರಂದು ಹೈದರಾಬಾದ್‍ನ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 4:50ರ ಸುಮಾರಿಗೆ ನಿಧನರಾಗಿದ್ದಾರೆ.

ವರದಿಗಳ ಪ್ರಕಾರ, ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲು ಸಿದ್ಧತೆಗಳು ನಡೆಯುತ್ತಿವೆ. ಅಲ್ಲಿ ಕುಟುಂಬದ ಸದಸ್ಯರು, ಸ್ನೇಹಿತರು ಮತ್ತು ಹಿತೈಷಿಗಳು ರಾಮೋಜಿ ರಾವ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

ರಾಮೋಜಿ ರಾವ್ ಅವರ ನಿಧನಕ್ಕೆ ನರೇಂದ್ರ ಮೋದಿ ಸೇರಿದಂತೆ ಹಲವು ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ. ರಾಮೋಜಿ ರಾವ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಕೊಡುಗೆ ಪತ್ರಿಕೋದ್ಯಮ ಮತ್ತು ಚಲನಚಿತ್ರ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರವಾಗಿ ಉತ್ಸುಕರಾಗಿದ್ದರು. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಜ್ಞಾನದಿಂದ ಪ್ರಯೋಜನ ಪಡೆಯಲು ಅನೇಕ ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮೋದಿ ಬರೆದುಕೊಂಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago