ಡಿಸ್ಪುರ್: ರಾಮ ಜನ್ಮಭೂಮಿ ಕೇವಲ ರಾಜಕೀಯ ವಿಷಯವಲ್ಲ, ಬದಲಾಗಿ ಸಾಂಸ್ಕೃತಿಕ ವಿಷಯವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ತೇಜ್ಪುರ ವಿಶ್ವವಿದ್ಯಾನಿಲಯದ 21ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನವರಿ 22 ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಅಂದು ಉಪಸ್ಥಿತರಿರುತ್ತಾರೆ ಎಂದರು.
ಇದೇ ವೇಳೆ ರಾಮಮಂದಿರದಿಂದ ಚುನಾವಣಾ ಲಾಭ ಪಡೆಯುವ ಬಗ್ಗೆ ಕೇಳಿದಾಗ, ಇದು ನಮಗೆ ಮತ ಪಡೆಯಲು ರಾಜಕೀಯ ವಿಷಯವಲ್ಲ, ರಾಮಜನ್ಮಭೂಮಿ ನಮಗೆ ಸಾಂಸ್ಕೃತಿಕ ವಿಷಯವಾಗಿದೆ ಎಂದು ಹೇಳಿದರು.
ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 16 ರಿಂದ ಏಳು ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿವೆ. ಅಂತಿಮ ದಿನವಾದ ಜನವರಿ 22 ರಂದು ಬೆಳಗ್ಗಿನ ಪೂಜೆಯ ನಂತರ ಮಧ್ಯಾಹ್ನ ಮೃಗಶಿರಾ ನಕ್ಷತ್ರದಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ ಎಂದರು.
ಇದೇ ವೇಳೆ ದೇಶದ ಆರ್ಥಿಕತೆಯ ಬಗ್ಗೆ ಮಾತನಾಡಿದ ಸಿಂಗ್, 2047 ರ ವೇಳೆಗೆ ನಾವು ವಿಶ್ವದ ಅತಿದೊಡ್ಡ ಆರ್ಥಿಕ ದೇಶವಾಗಿ ಹೊರಹೊಮ್ಮಲಿದ್ದೇವೆ ಎಂದು ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…