ಉಡುಪಿ, : “ರಾಮಮಂದಿರಕ್ಕೆ ಹಣ ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದು, ”ರಾಮ ಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತಿಗೆ ಸೂಚಿಸಿಲ್ಲ” ಎಂದು ಹೇಳಿದರು.
ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ”ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮಾಹಿತಿ ಸಂಗ್ರಹಿಸಿ ಇರಿಸುವಂತೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಗಲಿ ಅಥವಾ ಆರ್ಎಸ್ಎಸ್ ಆಗಲಿ ಯಾವುದೇ ಸೂಚನೆ ನೀಡಿಲ್ಲ. ದೇಣಿಗೆ ಕೊಟ್ಟವರ ಮಾಹಿತಿ ಮಾತ್ರ ಟ್ರಸ್ಟ್ಗೆ ಅಗತ್ಯವಾದುದು, ಆದ್ದರಿಂದ ಸಂಗ್ರಹಿಸುತ್ತಾರೆ” ಎಂದು ಸ್ಪಷ್ಟಪಡಿಸಿದರು.
ಮಂಗಳೂರು: ಎ.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ -Vishwanews24
”ರಾಮ ಮಂದಿರ ನಿರ್ಮಾಣಕ್ಕಾಗಿ ನಿರೀಕ್ಷೆಗೂ ಅಧಿಕ ದೇಣಿಗೆ ಸಂಗ್ರಹವಾಗುತ್ತಿದೆ. ಅದರಿಂದಾಗಿ ಈಗ ದೇಣಿಗೆ ಸ್ವೀಕಾರ ರಶೀದಿ ಹಾಗೂ ಕೂಪನ್ಗಳ ಕೊರತೆ ಎದುರಾಗಿದೆ. ಹಾಗಾಗಿ ಮುಂದೆ ದೇಣಿಗೆ ಪಡೆಯಲು ಅನುಕೂಲವಾಗಲಿ ಎಂದು ಮನೆಗಳಿಗೆ ಗುರುತು ಹಾಕಿರಬಹುದು. ಹಾಗೆ ಮಾಡಿದ್ದರೆ. ಅದರು ತಪ್ಪೇನಲ್ಲ” ಎಂದು ಸಮರ್ಥಿಸಿಕೊಂಡರು.
”ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿರುವುದು ಗಂಭೀರ ಆರೋಪ. ಅದಕ್ಕೆ ಬೇಕಾದ ಸಾಕ್ಷ್ಯ ಅವರು ನೀಡಿ ಆರೋಪ ಮಾಡಬೇಕು. ಸುಮ್ಮನೇ ರಾಮ ಮಂದಿರ ಆರೋಪ ಮಾಡುವುದು ಬೇಡ” ಎಂದು ಹೇಳಿದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…