ಉಡುಪಿ, : “ರಾಮಮಂದಿರಕ್ಕೆ ಹಣ ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದು, ”ರಾಮ ಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತಿಗೆ ಸೂಚಿಸಿಲ್ಲ” ಎಂದು ಹೇಳಿದರು.
ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ”ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮಾಹಿತಿ ಸಂಗ್ರಹಿಸಿ ಇರಿಸುವಂತೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಗಲಿ ಅಥವಾ ಆರ್ಎಸ್ಎಸ್ ಆಗಲಿ ಯಾವುದೇ ಸೂಚನೆ ನೀಡಿಲ್ಲ. ದೇಣಿಗೆ ಕೊಟ್ಟವರ ಮಾಹಿತಿ ಮಾತ್ರ ಟ್ರಸ್ಟ್ಗೆ ಅಗತ್ಯವಾದುದು, ಆದ್ದರಿಂದ ಸಂಗ್ರಹಿಸುತ್ತಾರೆ” ಎಂದು ಸ್ಪಷ್ಟಪಡಿಸಿದರು.
ಮಂಗಳೂರು: ಎ.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ -Vishwanews24
”ರಾಮ ಮಂದಿರ ನಿರ್ಮಾಣಕ್ಕಾಗಿ ನಿರೀಕ್ಷೆಗೂ ಅಧಿಕ ದೇಣಿಗೆ ಸಂಗ್ರಹವಾಗುತ್ತಿದೆ. ಅದರಿಂದಾಗಿ ಈಗ ದೇಣಿಗೆ ಸ್ವೀಕಾರ ರಶೀದಿ ಹಾಗೂ ಕೂಪನ್ಗಳ ಕೊರತೆ ಎದುರಾಗಿದೆ. ಹಾಗಾಗಿ ಮುಂದೆ ದೇಣಿಗೆ ಪಡೆಯಲು ಅನುಕೂಲವಾಗಲಿ ಎಂದು ಮನೆಗಳಿಗೆ ಗುರುತು ಹಾಕಿರಬಹುದು. ಹಾಗೆ ಮಾಡಿದ್ದರೆ. ಅದರು ತಪ್ಪೇನಲ್ಲ” ಎಂದು ಸಮರ್ಥಿಸಿಕೊಂಡರು.
”ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿರುವುದು ಗಂಭೀರ ಆರೋಪ. ಅದಕ್ಕೆ ಬೇಕಾದ ಸಾಕ್ಷ್ಯ ಅವರು ನೀಡಿ ಆರೋಪ ಮಾಡಬೇಕು. ಸುಮ್ಮನೇ ರಾಮ ಮಂದಿರ ಆರೋಪ ಮಾಡುವುದು ಬೇಡ” ಎಂದು ಹೇಳಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…