ಉಡುಪಿ, : “ರಾಮಮಂದಿರಕ್ಕೆ ಹಣ ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದು, ”ರಾಮ ಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತಿಗೆ ಸೂಚಿಸಿಲ್ಲ” ಎಂದು ಹೇಳಿದರು.
ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ”ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮಾಹಿತಿ ಸಂಗ್ರಹಿಸಿ ಇರಿಸುವಂತೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಗಲಿ ಅಥವಾ ಆರ್ಎಸ್ಎಸ್ ಆಗಲಿ ಯಾವುದೇ ಸೂಚನೆ ನೀಡಿಲ್ಲ. ದೇಣಿಗೆ ಕೊಟ್ಟವರ ಮಾಹಿತಿ ಮಾತ್ರ ಟ್ರಸ್ಟ್ಗೆ ಅಗತ್ಯವಾದುದು, ಆದ್ದರಿಂದ ಸಂಗ್ರಹಿಸುತ್ತಾರೆ” ಎಂದು ಸ್ಪಷ್ಟಪಡಿಸಿದರು.
ಮಂಗಳೂರು: ಎ.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ -Vishwanews24
”ರಾಮ ಮಂದಿರ ನಿರ್ಮಾಣಕ್ಕಾಗಿ ನಿರೀಕ್ಷೆಗೂ ಅಧಿಕ ದೇಣಿಗೆ ಸಂಗ್ರಹವಾಗುತ್ತಿದೆ. ಅದರಿಂದಾಗಿ ಈಗ ದೇಣಿಗೆ ಸ್ವೀಕಾರ ರಶೀದಿ ಹಾಗೂ ಕೂಪನ್ಗಳ ಕೊರತೆ ಎದುರಾಗಿದೆ. ಹಾಗಾಗಿ ಮುಂದೆ ದೇಣಿಗೆ ಪಡೆಯಲು ಅನುಕೂಲವಾಗಲಿ ಎಂದು ಮನೆಗಳಿಗೆ ಗುರುತು ಹಾಕಿರಬಹುದು. ಹಾಗೆ ಮಾಡಿದ್ದರೆ. ಅದರು ತಪ್ಪೇನಲ್ಲ” ಎಂದು ಸಮರ್ಥಿಸಿಕೊಂಡರು.
”ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿರುವುದು ಗಂಭೀರ ಆರೋಪ. ಅದಕ್ಕೆ ಬೇಕಾದ ಸಾಕ್ಷ್ಯ ಅವರು ನೀಡಿ ಆರೋಪ ಮಾಡಬೇಕು. ಸುಮ್ಮನೇ ರಾಮ ಮಂದಿರ ಆರೋಪ ಮಾಡುವುದು ಬೇಡ” ಎಂದು ಹೇಳಿದರು.
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…