Featured

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ

ಬೆಂಗಳೂರು: ರಾಮ ಮಂದಿರ ದೇಣಿಗೆ ಅಕ್ರಮ ವಿಚಾರ ಮನಸಿಗೆ ಘಾಸಿ ಉಂಟು ಮಾಡಿದೆ. ಯೋಗಿ ಯಾರ ತಪ್ಪನ್ನೂ ಸಹಿಸಲ್ಲ ಎಂದು ಬಿಜೆಪಿ ನಾಯಕ ಸಿ.ಟಿ ರವಿ ತಿಳಿಸಿದ್ದಾರೆ.

ರಾಮ ಮಂದಿರ ದೇಣಿಗೆ ಅಕ್ರಮ ವಿಚಾರ ಮತ್ತು ಬಿಜೆಪಿ – ಆರ್‌ಎಸ್‌ಎಸ್‌ಗೆ ಡೊನೇಷನ್ ಫಸ್ಟ್ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಮ ಮಂದಿರ ನಿರ್ಮಾಣ ಕಾರ್ಯ 500 ವರ್ಷಗಳ ಶ್ರಮ. ಇದಕ್ಕಾಗಿ ಲಕ್ಷಾಂತರ ಜನ ಪ್ರಾಣ ಕೊಟ್ಟಿದ್ದಾರೆ. 1 ರೂ.ನಿಂದ ಕೋಟಿ ರೂಪಾಯಿ ಡೊನೇಷನ್ ಕೊಟ್ಟಿದ್ದಾರೆ. ಆ ಭಾವನೆಗೆ ಬೆಲೆ ಕಟ್ಟಲು ಆಗಲ್ಲ. ಆ ಭಾವನೆಗೆ ಘಾಸಿ ಆಗಬಾರದು. ಈ ಸುದ್ದಿ ನಮ್ಮ ಮನಸಿಗೆ ಘಾಸಿ ಮಾಡಿದೆ ಎಂದರು.

ಇದನ್ನೂ ಓದಿ: 

ರಾಮ ಮಂದಿರ ವಿರೋಧಿಗಳಿಗೆ ಈಗ ಯಾಕೆ ಸಂಕಟ ಆಗುತ್ತಿದೆ. ಅವರ ಉದ್ದೇಶ ರಾಮ ಮಂದಿರದ ದೇಣಿಗೆ ಕುರಿತು ಅಲ್ಲ. ರಾಮನ ಅಸ್ತಿತ್ವ ಪ್ರಶ್ನೆ ಮಾಡಿದವರು ಇವರು. ರಾಜಕೀಯಕ್ಕೆ ಇದನ್ನ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಮಿಸ್ಟರ್ ಪ್ರಿಯಾಂಕ್ ಖರ್ಗೆ ಅವರೇ ಈ ಟ್ರಸ್ಟ್ನಲ್ಲಿ ಬಿಜೆಪಿಯ ಯಾವ ಪದಾಧಿಕಾರಿಗಳೂ ಇರಲಿಲ್ಲ. ರಾಮ ಮಂದಿರಕ್ಕಾಗಿ ನಾವು ಕರ ಸೇವೆಗೆ ಹೋಗಿದ್ವಿ, ಜೈಲಿಗೆ ಹೋಗಿದ್ವಿ. ನೀವು ರಾಮಮಂದಿರ ಆಗಲಿ ಅಂತ ಹೇಳೋಕಾಗದೇ ಹೇಡಿಗಳು ಆಗಿದ್ರಿ ಎಂದು ಕಿಡಿಕಾರಿದರು.

ಇದನ್ನೂ ಓದಿ: 

ಚಿಂತೆ ಮಾಡಬೇಡಿ ಅಲ್ಲಿ ಯೋಗಿಇದ್ದಾರೆ. ಯೋಗಿ ಯಾರ ತಪ್ಪನ್ನೂ ಸಹಿಸಲ್ಲ. ಹಾಗಾಗಿ 8 ಜನರನ್ನು ಜೈಲಿಗೆ ಹಾಕಿದ್ದಾರೆ. ನಿಮ್ಮ ಬಳಿ ಬೇರೆ ಮಾಹಿತಿ ಇದ್ದರೆ ಎಸ್‌ಐಟಿಗೆ ಕೊಡಲಿ ಅಂತ ತಿರುಗೇಟು ಕೊಟ್ಟರು. ಕಾಂಗ್ರೆಸ್ ಅವರಿಗೆ ರಾಮನ ಬಗ್ಗೆ ಪ್ರೀತಿ ಇಲ್ಲ. ರಾಮ ಮಂದಿರ ನಿರ್ಮಾಣಕ್ಕೆ ನೀವು ಅಡತಡೆ ನಿವಾರಿಸಿಲ್ಲ, ವಿರೋಧಿಸಿದ್ರಿ. ಈಗ ಯಾಕೆ ಮಾತನಾಡುತ್ತೀರಾ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Vishwa News 24

Recent Posts

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

22 minutes ago

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

37 minutes ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

1 hour ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

2 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

23 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

23 hours ago