ಉಡುಪಿ:ರಾಮ ಮಂದಿರ ನಿರ್ಮಾಣದ ವಿರುದ್ಧವಾಗಿ ಸುಪ್ರಿಂ ತೀರ್ಪು ನೀಡಿದರೆ ನಾನೇ ಮೊದಲು ವಿರೋಧಿಸುತ್ತೇನೆ. ಹಿಂದೂ ಸಮಾಜದವರು ದೇಶಾದ್ಯಂತ ಸಂಘಟಿತರಾಗಬೇಕು ಎಂದು ಪೇಜಾವರ ಶ್ರೀ ಹೇಳಿದರು.
ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಧಾರ್ಮಿಕ ವಿಚಾರಗಳು ಕೋರ್ಟ್ ಗೆ ಯಾಕೆ? ಶಬರಿಮಲೆ ಹಿಂದೂ ಸಮಾಜದ ಕೇಂದ್ರ ಬಿಂದು. ಇಲ್ಲಿನ ಸಂಪ್ರದಾಯ ಬೇರೆ ಯಾವ ಕ್ಷೇತ್ರದಲ್ಲಿಯೂ ಇಲ್ಲ. ಧಾರ್ಮಿಕ ಶಿಸ್ತಿನ ಶಿಕ್ಷಣವನ್ನು ಅಯ್ಯಪ್ಪ ಕಲಿಸಿದ್ದಾನೆ. ನಿಯಮಬದ್ಧ ದೇವಾಲಯದ ವಿಚಾರದಲ್ಲಿ ಆಂದೋಲನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.
ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು. ಇಂತಹ ನಿರ್ಣಯವನ್ನು ಸಂತರು, ಭಕ್ತರು ಮಾಡಬೇಕು. ದೇವಸ್ಥಾನಗಳಿಗೆ ದಲಿತರ ಪ್ರವೇಶಕ್ಕೆ ಹಿಂದೂ ಸಮಾಜದ ಬೆಂಬಲವಿದೆ. ಆದರೆ ಕೋರ್ಟ್ ಧಾರ್ಮಿಕ ಪರಿವರ್ತನೆಯನ್ನು ಮಾಡಬಾರದು ಎಂದ ಶ್ರೀಗಳು, ಕೇರಳ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಪ್ರಜೆಗಳನ್ನು ಧಮನ ಮಾಡುತ್ತಿದೆ. ಇತ್ತ ಕೇರಳ ಸರ್ಕಾರವು ಸರ್ವಾಧಿಕಾರಿ ಧೋರಣೆ ತಾಳಿದೆ ಎಂದು ಆರೋಪಿಸಿದರು.
ಪಂದಳ ರಾಜರು, ಭಕ್ತರು, ಅರ್ಚಕರ ಅಭಿಪ್ರಾಯಕ್ಕೆ ಕೋರ್ಟ್ ಮನ್ನಣೆ ನೀಡಲಿ. ಹಿಂದೂ ಸಮಾಜ ಮಹಿಳೆಯರನ್ನು ತಿರಸ್ಕಾರ ಮಾಡಿಲ್ಲ. ನಮ್ಮ ಸಂಪ್ರದಾಯವನ್ನು ಮಹಿಳೆಯರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಜಾಹೀರಾತುಗಳು
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…