ಬೆಳ್ತಂಗಡಿ, : ರಾಮರಾಜ್ಯದ ಕಲ್ಪನೆಗೆ ಕೇಂದ್ರವಾಗಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಅತೀ ಅಗತ್ಯ. ಈ ಶಿಲಾನ್ಯಾಸದ ಶುಭ ಮುಹೂರ್ತದಲ್ಲಿ ಪ್ರಾರಂಭವಾಗಿರುವ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನೆರವೇರಲೆಂದು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಾರ್ಥಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿರುವುದು ಭಾರತೀಯರೆಲ್ಲರಿಗೂ ಶುಭ ಸುದ್ದಿ. ಶ್ರೀರಾಮ ಭಗವಂತನ ಅವತಾರವೆಂದು ಭಾರತೀಯರ ನಂಬಿಕೆ, ಶ್ರದ್ಧೆ. ಆತ ಭೂಮಿಯಲ್ಲಿ ಅವತರಿಸಿದ ಬಳಿಕ ತನ್ನ ಸದ್ಗುಣಗಳಿಂದ ಆದರ್ಶಮೂರ್ತಿ ಎನಿಸಿದ. ಸಹಸ್ರಾರು ವರ್ಷಗಳಿಂದ ಮರ್ಯಾದಾ ಪುರುಷೋತ್ತಮನೆನಿಸಿ ತನ್ನ ವ್ಯಕ್ತಿತ್ವ, ದೃಢ ನಿರ್ಧಾರಗಳಿಂದಾಗಿ ಜನಮಾನಸದಲ್ಲಿ ನೆಲೆಯಾದ. ತನ್ನ ಆದರ್ಶಗಳಿಂದ ವಿಶ್ವವ್ಯಾಪಿಯಾದ.
ಆಧುನಿಕ ಜಗತ್ತಿನ ಭೌತಿಕ ಪ್ರಗತಿಯ ಮಧ್ಯೆಯೂ ರಮಾನಂದಸಾಗರರ ‘ರಾಮಾಯಣ’ ದೂರದರ್ಶನದಲ್ಲಿ ಪ್ರಸಾರವಾದಾಗ ಜನರು ಈ ರಾಮಕತೆಯಿಂದ, ರಾಮನ ಆದರ್ಶಗಳಿಂದ ಆಕರ್ಷಿತವಾಗಿರುವುದನ್ನು ಕಂಡರೆ ಶ್ರೀರಾಮ ಸ್ಮರಣೆ ಇನ್ನೂ ಸಹಸ್ರ ವರ್ಷಗಳವರೆಗೆ ಈ ನೆಲದಲ್ಲಿ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಎಂಬುದು ಸತ್ಯ.
ಕೆಲವೇ ತಿಂಗಳ ಹಿಂದೆ ಅಯೋಧ್ಯೆಗೆ ಹೋಗಿ ಪವಿತ್ರ ಭೂ ಸ್ಪರ್ಶ ಮಾಡಿ ಹಿರಿಯ ಸಂತರಿಗೆ ಗೌರವ ಸಲ್ಲಿಸಿ ಬಂದಿದ್ದೇನೆ. ಈ ಸಾಧನೆಗೆ ಸಂಕಲ್ಪ ಮಾಡಿದ ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲಾ ಶ್ರದ್ಧಾಳುಗಳಿಗೂ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…