ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿರುವುದು ಭಾರತೀಯರೆಲ್ಲರಿಗೂ ಶುಭ ಸುದ್ದಿ, ಮಂದಿರದ ನಿರ್ಮಾಣಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಶ್ರದ್ಧಾಳುಗಳಿಗೆ ಅಭಿನಂದನೆ’ : ವೀರೇಂದ್ರ ಹೆಗ್ಗಡೆ -Vishwanews24

ಬೆಳ್ತಂಗಡಿ,  : ರಾಮರಾಜ್ಯದ ಕಲ್ಪನೆಗೆ ಕೇಂದ್ರವಾಗಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಅತೀ ಅಗತ್ಯ. ಈ ಶಿಲಾನ್ಯಾಸದ ಶುಭ ಮುಹೂರ್ತದಲ್ಲಿ ಪ್ರಾರಂಭವಾಗಿರುವ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನೆರವೇರಲೆಂದು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಾರ್ಥಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿರುವುದು ಭಾರತೀಯರೆಲ್ಲರಿಗೂ ಶುಭ ಸುದ್ದಿ. ಶ್ರೀರಾಮ ಭಗವಂತನ ಅವತಾರವೆಂದು ಭಾರತೀಯರ ನಂಬಿಕೆ, ಶ್ರದ್ಧೆ. ಆತ ಭೂಮಿಯಲ್ಲಿ ಅವತರಿಸಿದ ಬಳಿಕ ತನ್ನ ಸದ್ಗುಣಗಳಿಂದ ಆದರ್ಶಮೂರ್ತಿ ಎನಿಸಿದ. ಸಹಸ್ರಾರು ವರ್ಷಗಳಿಂದ ಮರ್ಯಾದಾ ಪುರುಷೋತ್ತಮನೆನಿಸಿ ತನ್ನ ವ್ಯಕ್ತಿತ್ವ, ದೃಢ ನಿರ್ಧಾರಗಳಿಂದಾಗಿ ಜನಮಾನಸದಲ್ಲಿ ನೆಲೆಯಾದ. ತನ್ನ ಆದರ್ಶಗಳಿಂದ ವಿಶ್ವವ್ಯಾಪಿಯಾದ.

ಆಧುನಿಕ ಜಗತ್ತಿನ ಭೌತಿಕ ಪ್ರಗತಿಯ ಮಧ್ಯೆಯೂ ರಮಾನಂದಸಾಗರರ ‘ರಾಮಾಯಣ’ ದೂರದರ್ಶನದಲ್ಲಿ ಪ್ರಸಾರವಾದಾಗ ಜನರು ಈ ರಾಮಕತೆಯಿಂದ, ರಾಮನ ಆದರ್ಶಗಳಿಂದ ಆಕರ್ಷಿತವಾಗಿರುವುದನ್ನು ಕಂಡರೆ ಶ್ರೀರಾಮ ಸ್ಮರಣೆ ಇನ್ನೂ ಸಹಸ್ರ ವರ್ಷಗಳವರೆಗೆ ಈ ನೆಲದಲ್ಲಿ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಎಂಬುದು ಸತ್ಯ.

ಕೆಲವೇ ತಿಂಗಳ ಹಿಂದೆ ಅಯೋಧ್ಯೆಗೆ ಹೋಗಿ ಪವಿತ್ರ ಭೂ ಸ್ಪರ್ಶ ಮಾಡಿ ಹಿರಿಯ ಸಂತರಿಗೆ ಗೌರವ ಸಲ್ಲಿಸಿ ಬಂದಿದ್ದೇನೆ. ಈ ಸಾಧನೆಗೆ ಸಂಕಲ್ಪ ಮಾಡಿದ ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲಾ ಶ್ರದ್ಧಾಳುಗಳಿಗೂ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

2 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

3 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

3 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

3 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago