Featured

ರಾಮ ಮಂದಿರವನ್ನು ಕಟ್ಟೇ ಕಟ್ಟುತ್ತೇವೆ. ಇದು ಸ್ವಾಭಿಮಾನದ ಸಂಕೇತ’ : ಕೆ.ಎಸ್.ಈಶ್ವರಪ್ಪ -Vishwanews24

ಬೆಂಗಳೂರು: ‘ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭೇಟಿ ಮಾಡಿದ ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವ ಆಸೆಯಿದೆ ಎಂದಿದ್ದರು. ಆದರೆ, ಕ್ಷೇತ್ರದಲ್ಲಿ 50 ಸಾವಿರ ಮುಸ್ಲಿಂ ಮತಗಳಿದ್ದು, ಅದನ್ನು ಕಳೆದುಕೊಂಡರೆ ಸೋಲುತ್ತೇವೆ ಎನ್ನುವುದು ಅವರ ಅಳಲಾಗಿತ್ತು. ಈ ರೀತಿಯ ಹಿಜಡಾತನ ಕೆಲವರಲ್ಲಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಾಮ ಸೇನೆ ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘370ನೇ ವಿಧಿ ರದ್ದತಿಗಾಗಿ ಪ್ರಧಾನಿಗೆ ಅಭಿನಂದನೆ’ ಸಮಾರಂಭದಲ್ಲಿ ಮಾತನಾಡಿದರು.

‘370ನೇ ವಿಧಿ, ತ್ರಿವಳಿ ತಲಾಖ್ ರದ್ದತಿಗೆ ಇಡೀ ರಾಷ್ಟ್ರ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಅಖಂಡ ಭಾರತ ನಿರ್ಮಾಣವಾಗಬೇಕೆಂಬ ಆಸೆಯಿದೆ. ಆದರೆ, ಇನ್ನೂ ಕೆಲವರು ಮುಸ್ಲಿಮರ ಮತಗಳನ್ನೇ ನಂಬಿಕೊಂಡಿದ್ದಾರೆ. ನನ್ನ ಕ್ಷೇತ್ರದಲ್ಲಿ 8 ಸಾವಿರದಿಂದ 9 ಸಾವಿರ ಕುರುಬರ ಮತವಿದೆ. ಅದೇ ಮುಸ್ಲಿಮರ ಮತ 50 ಸಾವಿರದಿಂದ 60 ಸಾವಿರವಿದೆ. ಆದರೆ, ಇದೂವರೆಗೂ ಒಬ್ಬ ಮುಸ್ಲಿಮನಿಗೂ ನಮಸ್ಕಾರ ಹೊಡೆದು ಮತ ಕೇಳಿಲ್ಲ. ಅದಾಗಿಯೂ 47 ಸಾವಿರ ಮತಗಳ ಅಂತರದಿಂದ ಗೆದ್ದಿರುವೆ. ರಾಷ್ಟ್ರ ಭಕ್ತಿ ಹೊಂದಿರುವ ಮುಸ್ಲಿಮರು ಬಿಜೆಪಿಗೆ ಮತ ಹಾಕುತ್ತಾರೆ. ಯಾರಿಗೆ ಪಾಕಿಸ್ತಾನದ ಪರ ಒಲವಿದೆಯೋ ಅವರು ಮತ ಹಾಕಲು ಹಿಂದೇಟು ಹಾಕುತ್ತಾರೆ’ ಎಂದರು.

‘ಹಿಂದೆ ನಾವು ಅಧಿಕಾರದಲ್ಲಿದ್ದಾಗ ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಿದ್ದೇವು. ಆದರೆ, ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈ ಕಾನೂನು ರದ್ದು ಮಾಡಿತು. ಇದೀಗ ನಮ್ಮ ಸರ್ಕಾರ ಗೋವಿನ ಸಂತತಿ ಉಳಿವಿಗಾಗಿ ಕಾನೂನು ಜಾರಿ ಮಾಡಲಿದೆ’ ಎಂದರು.

‘ಈ ದೇಶದ ಹಿಂದೂಗಳು ನಪುಂಸಕರಲ್ಲ. ರಾಮ ಮಂದಿರದ ವಿಚಾರವಾಗಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿ, ತಾತ್ಕಾಲಿಕವಾಗಿ ರಾಮ್ ಲೀಲಾ ಮಂದಿರ ಕಟ್ಟಲಾಗಿದೆ. ಇಲ್ಲಿ ರಾಮ ಮಂದಿರವನ್ನು ಕಟ್ಟೇ ಕಟ್ಟುತ್ತೇವೆ. ಇದು ಸ್ವಾಭಿಮಾನದ ಸಂಕೇತ’ ಎಂದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago