ಬೆಂಗಳೂರು: ‘ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭೇಟಿ ಮಾಡಿದ ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವ ಆಸೆಯಿದೆ ಎಂದಿದ್ದರು. ಆದರೆ, ಕ್ಷೇತ್ರದಲ್ಲಿ 50 ಸಾವಿರ ಮುಸ್ಲಿಂ ಮತಗಳಿದ್ದು, ಅದನ್ನು ಕಳೆದುಕೊಂಡರೆ ಸೋಲುತ್ತೇವೆ ಎನ್ನುವುದು ಅವರ ಅಳಲಾಗಿತ್ತು. ಈ ರೀತಿಯ ಹಿಜಡಾತನ ಕೆಲವರಲ್ಲಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಶ್ರೀರಾಮ ಸೇನೆ ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘370ನೇ ವಿಧಿ ರದ್ದತಿಗಾಗಿ ಪ್ರಧಾನಿಗೆ ಅಭಿನಂದನೆ’ ಸಮಾರಂಭದಲ್ಲಿ ಮಾತನಾಡಿದರು.
‘370ನೇ ವಿಧಿ, ತ್ರಿವಳಿ ತಲಾಖ್ ರದ್ದತಿಗೆ ಇಡೀ ರಾಷ್ಟ್ರ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಅಖಂಡ ಭಾರತ ನಿರ್ಮಾಣವಾಗಬೇಕೆಂಬ ಆಸೆಯಿದೆ. ಆದರೆ, ಇನ್ನೂ ಕೆಲವರು ಮುಸ್ಲಿಮರ ಮತಗಳನ್ನೇ ನಂಬಿಕೊಂಡಿದ್ದಾರೆ. ನನ್ನ ಕ್ಷೇತ್ರದಲ್ಲಿ 8 ಸಾವಿರದಿಂದ 9 ಸಾವಿರ ಕುರುಬರ ಮತವಿದೆ. ಅದೇ ಮುಸ್ಲಿಮರ ಮತ 50 ಸಾವಿರದಿಂದ 60 ಸಾವಿರವಿದೆ. ಆದರೆ, ಇದೂವರೆಗೂ ಒಬ್ಬ ಮುಸ್ಲಿಮನಿಗೂ ನಮಸ್ಕಾರ ಹೊಡೆದು ಮತ ಕೇಳಿಲ್ಲ. ಅದಾಗಿಯೂ 47 ಸಾವಿರ ಮತಗಳ ಅಂತರದಿಂದ ಗೆದ್ದಿರುವೆ. ರಾಷ್ಟ್ರ ಭಕ್ತಿ ಹೊಂದಿರುವ ಮುಸ್ಲಿಮರು ಬಿಜೆಪಿಗೆ ಮತ ಹಾಕುತ್ತಾರೆ. ಯಾರಿಗೆ ಪಾಕಿಸ್ತಾನದ ಪರ ಒಲವಿದೆಯೋ ಅವರು ಮತ ಹಾಕಲು ಹಿಂದೇಟು ಹಾಕುತ್ತಾರೆ’ ಎಂದರು.
‘ಹಿಂದೆ ನಾವು ಅಧಿಕಾರದಲ್ಲಿದ್ದಾಗ ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಿದ್ದೇವು. ಆದರೆ, ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈ ಕಾನೂನು ರದ್ದು ಮಾಡಿತು. ಇದೀಗ ನಮ್ಮ ಸರ್ಕಾರ ಗೋವಿನ ಸಂತತಿ ಉಳಿವಿಗಾಗಿ ಕಾನೂನು ಜಾರಿ ಮಾಡಲಿದೆ’ ಎಂದರು.
‘ಈ ದೇಶದ ಹಿಂದೂಗಳು ನಪುಂಸಕರಲ್ಲ. ರಾಮ ಮಂದಿರದ ವಿಚಾರವಾಗಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿ, ತಾತ್ಕಾಲಿಕವಾಗಿ ರಾಮ್ ಲೀಲಾ ಮಂದಿರ ಕಟ್ಟಲಾಗಿದೆ. ಇಲ್ಲಿ ರಾಮ ಮಂದಿರವನ್ನು ಕಟ್ಟೇ ಕಟ್ಟುತ್ತೇವೆ. ಇದು ಸ್ವಾಭಿಮಾನದ ಸಂಕೇತ’ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…