ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯ ಕರಾದ ಎಲ್.ಕೆ.ಆಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಅವರನ್ನು ವಿಶ್ವ ಹಿಂದೂ ಪರಿಷತ್ ಮಂಗಳವಾರ ಭೇಟಿಯಾಗಿ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಿದೆ.
ವಿಎಚ್ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಅಲೋಕ್ ಕುಮಾರ್ ಮಾಹಿತಿ ನೀಡಿದ್ದು, ರಾಮ ಮಂದಿರ ಚಳವಳಿಯ ನೇತಾರರಾದ ಅಡ್ವಾಣಿ ಹಾಗೂ ಜೋಶಿ ಇಬ್ಬರನ್ನೂ ಭೇಟಿಯಾಗಿ, ಮಂದಿರ ಉದ್ಘಾಟನೆಗೆ ಆಹ್ವಾನ ನೀಡಿದ್ದೇವೆ. ಇಬ್ಬರೂ ಹಿರಿ ಯರು ಬರುವ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಮಂದಿರ ಚಳವಳಿ ಕುರಿತಂತೆ ಅವರೊಂದಿಗೆ ಚರ್ಚೆ ನಡೆಸಿದೆವು ಎಂದು ತಿಳಿಸಿದ್ದಾರೆ.
ಅಡ್ವಾಣಿ ಹಾಗೂ ಜೋಷಿಯವರು ಹಿರಿಯರಾಗಿರುವ ಹಾಗೂ ಅನಾರೋಗ್ಯವಿರುವ ಕಾರಣ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬರದಂತೆ ಮನವಿ ಮಾಡಲಾಗಿದ್ದು, ಅದಕ್ಕೆ ಅವರು ಒಪ್ಪಿದ್ದಾರೆ ಎಂದು ಮಂದಿರ ಟ್ರಸ್ಟ್ನ ಚಂಪತ್ ರಾಯ್ ನೀಡಿದ್ದ ಹೇಳಿಕೆ ವಿವಾದಕ್ಕೀಡಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಟ್ರಸ್ಟ್ನ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಇಬ್ಬರೂ ನಾಯಕರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಅವರ ಆರೋಗ್ಯ ದೃಷ್ಟಿಯಿಂದ ಸಮಾರಂಭಕ್ಕೆ ಆಗಮಿಸದಂತೆ ವಿನಂತಿ ಮಾಡಿದ್ದೇವೆ ಎಂದು ತಿಳಿಸಿದ್ದರು
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…