ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯ ಕರಾದ ಎಲ್.ಕೆ.ಆಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಅವರನ್ನು ವಿಶ್ವ ಹಿಂದೂ ಪರಿಷತ್ ಮಂಗಳವಾರ ಭೇಟಿಯಾಗಿ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಿದೆ.
ವಿಎಚ್ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಅಲೋಕ್ ಕುಮಾರ್ ಮಾಹಿತಿ ನೀಡಿದ್ದು, ರಾಮ ಮಂದಿರ ಚಳವಳಿಯ ನೇತಾರರಾದ ಅಡ್ವಾಣಿ ಹಾಗೂ ಜೋಶಿ ಇಬ್ಬರನ್ನೂ ಭೇಟಿಯಾಗಿ, ಮಂದಿರ ಉದ್ಘಾಟನೆಗೆ ಆಹ್ವಾನ ನೀಡಿದ್ದೇವೆ. ಇಬ್ಬರೂ ಹಿರಿ ಯರು ಬರುವ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಮಂದಿರ ಚಳವಳಿ ಕುರಿತಂತೆ ಅವರೊಂದಿಗೆ ಚರ್ಚೆ ನಡೆಸಿದೆವು ಎಂದು ತಿಳಿಸಿದ್ದಾರೆ.
ಅಡ್ವಾಣಿ ಹಾಗೂ ಜೋಷಿಯವರು ಹಿರಿಯರಾಗಿರುವ ಹಾಗೂ ಅನಾರೋಗ್ಯವಿರುವ ಕಾರಣ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬರದಂತೆ ಮನವಿ ಮಾಡಲಾಗಿದ್ದು, ಅದಕ್ಕೆ ಅವರು ಒಪ್ಪಿದ್ದಾರೆ ಎಂದು ಮಂದಿರ ಟ್ರಸ್ಟ್ನ ಚಂಪತ್ ರಾಯ್ ನೀಡಿದ್ದ ಹೇಳಿಕೆ ವಿವಾದಕ್ಕೀಡಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಟ್ರಸ್ಟ್ನ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಇಬ್ಬರೂ ನಾಯಕರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಅವರ ಆರೋಗ್ಯ ದೃಷ್ಟಿಯಿಂದ ಸಮಾರಂಭಕ್ಕೆ ಆಗಮಿಸದಂತೆ ವಿನಂತಿ ಮಾಡಿದ್ದೇವೆ ಎಂದು ತಿಳಿಸಿದ್ದರು
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…